ಸಾರಿಗೆ ಬಸ್ ನಿಲುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ; ಸಾರಿಗೆ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಹಾಗೂ ಸಾರಿಗೆ ಬಸ್  ಅವ್ಯವಸ್ಥೆಯನ್ನು ಖಂಡಿಸಿ ಶಿಂಡನಪುರ ಗ್ರಾಮಸ್ಥರು ಇಂದು‌ ಪ್ರತಿಭಟನೆ ನಡೆಸಿದರು. ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪ್ರಶ್ನೆಗೆ ತಬ್ಬಿಬ್ಬಾದ ಮಹಿಳಾ ಆಯೋಗದ ಅಧ್ಯಕ್ಷರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿಂಡನಪುರ ಗ್ರಾಮವು  ತೆರಕಣಾಂಬಿ ಹಾಗೂ ಗುಂಡ್ಲುಪೇಟೆ  ಮುಖ್ಯರಸ್ತೆಯಲ್ಲಿದೆ ಇಲ್ಲಿ ದಿನನಿತ್ಯ ವಿದ್ಯಾರ್ಥಿಗಳು ಸೇರಿದಂತೆ  ನೂರಾರು  ಸಾರ್ವಜನಿಕರು ಕಾರ್ಯನಿಮಿತ್ತ  ಸಂಚರಿಸುತ್ತಾರೆ. ಹಾಗಾಗಿ ಕೆ.ಎಸ.ಆರ್.ಟಿ.ಸಿ.ಬಸ್ಸುಗಳನ್ನು ಸರಿಯಾದ ಸಮಯಕ್ಕೆ ನಿಲುಗಡೆ ಮಾಡುವಂತೆ ಶಿಂಡನಪುರ ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.