ಮಂಡ್ಯ: ಬಸ್ ನಿಲ್ಲಿಸುವ ವಿಚಾರಕ್ಕೆ ಯುವಕರು ದಾಂಧಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ರಸ್ತೆಯಲ್ಲಿ ನಡೆದಿದೆ. ಬಸ್ ನಿಲ್ಲಿಸಲಿಲ್ಲ ಎಂದು ಸರ್ಕಾರಿ ಬಸ್ ಮೇಲೆ ಅನ್ಯಕೋಮಿನ ಯುವಕರ ಗುಂಪು ಕಲ್ಲು ತೂರಾಟ ನಡೆಸಿದೆ. ಬಳಿಕ ಯುವಕರನ್ನು ಹಿಡಿದು ಥಳಿಸಿದ ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ್ದಾರೆ.
ಆಗಿದ್ದೇನು..?
ಸಾರಿಗೆ ಬಸ್ವೊಂದು ಶ್ರೀರಂಗಪಟ್ಟಣದ ಕಡೆಯಿಂದ ಗಂಜಾಂಗೆ ತೆರಳುತ್ತಿತ್ತು. ಈ ವೇಳೆ ಯುವಕರ ಕುಟುಂಬ ಮೈಸೂರಿಗೆ ಹೋಗುವ ಬಸ್ ಬದಲು ಗಂಜಾಂಗೆ ತೆರಳುತ್ತಿದ್ದ ಬಸ್ ಹತ್ತಿದೆ. ಕಂಡಕ್ಟರ್ ಬಳಿ ನಾವು ಮೈಸೂರಿಗೆ ಹೋಗಬೇಕು ಎಂದು ಕುಟುಂಬಸ್ಥರು ಹೇಳಿದ್ದಾರೆ. ಇದು ಮೈಸೂರಿನ ಬಸ್ ಅಲ್ಲ ಎಂದು ನಿರ್ವಾಹಕ ಹೇಳ್ತಿದ್ದಂತೆ ಬಸ್ ನಿಲ್ಲಿಸುವಂತೆ ವಾಗ್ವಾದಕ್ಕಿಳಿದಿದ್ದಾರೆ. ಆಗ ಕಂಡಕ್ಟರ್ ಇಲ್ಲಿ ಸ್ಟಾಪ್ ಇಲ್ಲ, ಮುಂದೆ ನಿಲ್ಲಿಸೋದಾಗಿ ಹೇಳಿದ್ದಾರೆ. ಅಷ್ಟಕ್ಕೆ ಡ್ರೈವರ್, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ದರ್ಪ ತೋರಿದ್ದಾರೆ. ಅಲ್ಲದೇ ಬಸ್ ಮೇಲೆ ಕಲ್ಲೆಸೆದು, ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ನಂತರ ಕಲ್ಲೆಸೆದ ಅನ್ಯಕೋಮಿನ ಯುವಕರನ್ನ ಹಿಡಿದು ಥಳಿಸಿರುವ ಸಹ ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ್ದಾರೆ.