Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ರಾಗಿಣಿ…ಮತ್ತೆ ಬಣ್ಣ ಹಚ್ಚಿದ ಕುಮಾರ್‌ ಬಂಗಾರಪ್ಪ!

    By Author AINMay 8, 2025
    Share
    Facebook Twitter LinkedIn Pinterest Email
    Demo

    ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್‌ ಪಾತ್ರಗಳ ಮೂಲಕ ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್‌ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ದ್ವಿವೇದಿ, ಈಗ ಅಂಥದ್ದೇ ಒಂದು ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ರಾಗಿಣಿ ದ್ವಿವೇದಿ ನಾಯಕಿಯಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾದ ಹೆಸರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’. ಕೆಲ ದಿನಗಳ ಹಿಂದಷ್ಟೇ ಈ ಸಿನಿಮಾದ ಧ್ವನಿಮುದ್ರಣ ಕಾರ್ಯವನ್ನು ಆರಂಭಿಸಿದ್ದ ಚಿತ್ರತಂಡ, ಇದೀಗ ಹಾಡುಗಳ ಕೆಲಸವನ್ನು ಪೂರ್ಣಗೊಳಿಸಿ, ಚಿತ್ರದ ಚಿತ್ರೀಕರಣ ಕಾರ್ಯಕ್ಕೆ ಚಾಲನೆ ನೀಡಿದೆ.

    ನಟಿ ರಾಗಿಣಿ ದ್ವಿವೇದಿ ಅವರೊಂದಿಗೆ, ನಟ ಕುಮಾರ್‌ ಬಂಗಾರಪ್ಪ, ಹಿರಿಯ ನಟ ದೊಡ್ಡಣ್ಣ ಮೊದಲಾದ ಕಲಾವಿದರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ, ಹಿರಿಯ ನಟ ಶ್ರೀನಾಥ್‌ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಕೆ. ಹೆಚ್‌. ಮುನಿಯಪ್ಪ, ಶಾಸಕ ಎಲ್‌. ಶಿವರಾಮೇ ಗೌಡ, ‘ಕರ್ನಾಟಕ ರಾಜ್ಯ ಸರ್ಕಾರತಿ ಪಡಿತರ ವಿತರಕರ ಒಕ್ಕೂಟ’ದ ಅಧ್ಯಕ್ಷ ಟಿ. ಕೃಷ್ಣಪ್ಪ, ನಿರ್ಮಾಪಕ ಭಾ. ಮ. ಹರೀಶ್‌, ಭಾ. ಮ. ಗಿರೀಶ್‌ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

    ‘ಜಯಶಂಕರ ಟಾಕೀಸ್‌’ ಬ್ಯಾನರಿನಲ್ಲಿ ತೇಜು ಮೂರ್ತಿ ಮತ್ತು ಎಸ್‌. ಪದ್ಮಾವತಿ ಚಂದ್ರಶೇಖರ್‌ ಜಂಟಿಯಾಗಿ ನಿರ್ಮಿಸುತ್ತಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾಕ್ಕೆ ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ ‘ತಾಯವ್ವ’ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದ ಸಾತ್ವಿಕ್‌ ಪವನ್‌ ಕುಮಾರ್‌ ಈ ಸಿನಿಮಾಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಅನಂತ ಆರ್ಯನ್‌ ಈ ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ.

    ರಾಗಿಣಿ ದ್ವಿವೇದಿ ಮಾತನಾಡಿ, ‘ನನಗೆ ಇದೊಂದು ಹೊಸಥರದ ಪಾತ್ರ ಇಲ್ಲಿಯವರೆಗೆ ನಾನೆಂದೂ, ಈ ಥರದ ಪಾತ್ರಗಳನ್ನು ಮಾಡಿರಲಿಲ್ಲ. ಪಕ್ಕಾ ಹಳ್ಳಿಯ ಹೆಣ್ಣು ಮಗಳೊಬ್ಬಳು ತನ್ನ ಊರಿನ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ವ್ಯವಸ್ಥೆಯಲ್ಲಿ ಜನರಿಗೆ ಆಗುತ್ತಿರುವ ಅನ್ಯಾಯವನ್ನು ಹೇಗೆ ಎದುರಿಸಿ, ಬಡ ಮತ್ತು ಜನಸಾಮಾನ್ಯರಿಗೆ ನ್ಯಾಯ ಒದಗಿಸುತ್ತಾಳೆ ಎಂಬುದು ನನ್ನ ಪಾತ್ರ. ನಾನು ಈ ಸಿನಿಮಾದಲ್ಲಿ ಪಾರ್ವತಿ ಎಂಬ ಹಳ್ಳಿಯ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಮೊದಲ ಬಾರಿಗೆ ಕರ್ನಾಟಕದ ಅಪ್ಪಟ ಗ್ರಾಮೀಣ ಸೊಗಡಿನ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ತುಂಬ ಎಕ್ಸೈಟ್‌ ಆಗಿದ್ದೇನೆ. ಈ ಸಿನಿಮಾದ ಕಥೆ ಮತ್ತು ಪಾತ್ರ ನನಗೆ ತುಂಬ ಇಷ್ಟವಾಗಿದ್ದು, ತೆರೆಮೇಲೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಹೇಗೆ ಬರಬಹುದು ಎಂಬ ಕುತೂಹಲ ನನಗೂ ಇದೆ. ಒಂದೇ ಮಾತಿನಲ್ಲಿ ಹೇಳುವುದಾದರೆ, ಇದೊಂದು ಕಂಟೆಂಟ್‌ ಆಧಾರಿತ ಸಿನಿಮಾ. ಈ ಸಿನಿಮಾದಲ್ಲಿ ಹತ್ತಾರು ವಿಷಯಗಳಿವೆ. ಆ ವಿಷಯಗಳು ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ಕನೆಕ್ಟ್‌ ಆಗುವಂತಿದೆʼ ಎಂದರು.

    Post Views: 4

    Demo
    Share. Facebook Twitter LinkedIn Email WhatsApp

    Related Posts

    ಪೀಳಿಗೆಗಳನ್ನು ರೂಪಿಸುವ ಮಹಿಳೆಯರಿಗೆ ಅಮ್ಮಂದಿರ ದಿನದ ಶುಭಾಶಯಗಳು: ರಾಧಿಕಾ ಪಂಡಿತ್

    May 11, 2025

    ಹೊಸ ಬಾಳಿಗೆ ಹೆಜ್ಜೆ ಇಟ್ಟ ಬಿಗ್ ಬಾಸ್ ರಂಜಿತ್..! ತಾಳಿ ಕಟ್ಟುವ ವೇಳೆ ಮಾನಸಾ ಭಾವುಕ

    May 11, 2025

    Vikram Gaikwad: ಬಾಲಿವುಡ್‌ ಖ್ಯಾತ ಮೇಕಪ್ ಕಲಾವಿದ ವಿಕ್ರಮ್ ಗಾಯಕ್ವಾಡ್ ನಿಧನ

    May 11, 2025

    Mrunal Thakur-Sumanth: ಮೃಣಾಲ್ ಠಾಕೂರ್ ಜತೆ ಮದುವೆ ವಿಚಾರ: ಕೊನೆಗೂ ಕ್ಲಾರಿಟಿ ಕೊಟ್ಟ ನಟ ಸುಮಂತ್‌

    May 11, 2025

    Operation Sindoor: ‘ಆಪರೇಷನ್ ಸಿಂಧೂರ’ ಸಿನಿಮಾ ಪೋಸ್ಟರ್ ರಿಲೀಸ್: ಕ್ಷಮೆ ಕೇಳಿದ ನಿರ್ದೇಶಕ..! ಯಾಕೆ ಗೊತ್ತಾ..?

    May 11, 2025

    ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ..ಮತ್ತೊಂದು ಮದುವೆಗೆ ರೆಡಿ!

    May 10, 2025

    ನಿರಂತರ ನಿಂದನೆ, ಟೀಕೆ-ಟಿಪ್ಪಣೆಗಳನ್ನು ಸಮಂತಾ ನಿಭಾಯಿಸುವುದು ಹೇಗೆ?

    May 10, 2025

    ಸಂಚಿತ್ ಹೆಗ್ಡೆಗೆ ಡಿಮ್ಯಾಂಡೋ ಡಿಮ್ಯಾಂಡ್… ʼಒನ್ ಅಂಡ್ ಓನ್ಲಿ ಸುಖʼ ಎಂದ ಸಂಚಿತ್!

    May 10, 2025

    ಪತಿ ಪರಸ್ತ್ರೀ ಜೊತೆ ಓಡಾಟ..ಮಾಜಿ ಪತ್ನಿ ಎನ್ನಬೇಡಿ ಎಂದ ನಟ ರವಿ ಮೋಹನ್‌ ಪತ್ನಿ..ಆರತಿ ಬೆಂಬಲಕ್ಕೆ ನಿಂತ ನಟಿಯರು!

    May 10, 2025

    ಕಿಚ್ಚನಿಂದ ಪ್ರಧಾನಿಗೆ ಪತ್ರ…ಜೈ ಹಿಂದ್. ಜೈ ಕರ್ನಾಟಕ. ಜೈ ಭಾರತ ಎಂದ ಸುದೀಪ್! ‌

    May 10, 2025

    ʼಆಪರೇಷನ್‌ ಸಿಂಧೂರʼ ಸಿನಿಮಾದ ಪೋಸ್ಟರ್‌ ಬಿಡುಗಡೆ..ಯಾರು ಹೀರೋ?

    May 10, 2025

    ಸ್ಟಾರ್ ಸುವರ್ಣದಲ್ಲಿ ಹೊಚ್ಚ ಹೊಸ ಧಾರಾವಾಹಿ..ಸೀರಿಯಲ್‌ನತ್ತ ಬಹುಭಾಷಾ ನಟ ಸುಮನ್

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.