ಬೆಂಗಳೂರು:ಒಂದೇ ದಿನ ಸುರಿದ ರಣ ಮಳೆಗೆ ರಾಜಧಾನಿ ಬೆಂಗಳೂರು ಜಲಗಂಡಾಂತರದಿಂದ ನಲುಗಿ ಹೋಗಿದೆ. ಹೆಎಚ್ ಎಸ್ ಆರ್ ಲೇಔಟ್ ನ ಸಾಯಿ ಬಡಾವಣೆ ಸೇರಿದಂತೆ ನಗರದ ಹಲವು ಕಡೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಂಟಿಯಾಗಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೋಲನೆ ನಡೆಸಿದರು.
ಮೊದಲು ಯಲಹಂಕದಲ್ಲಿ ರಾಜಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಮುಲಾಜಿಲ್ಲದೆ ರಾಜಕಾಲುವೆ ಸೇರಿ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.
ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.
ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ, ಮುಲಾಜು ನೋಡಬೇಡಿ. ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.
ರಾಜಕಾಲುವೆ ಪ್ರದೇಶ ವೀಕ್ಷಣೆ
ಇನ್ನ HBR ಲೇಔಟ್ ನಲ್ಲಿ ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಿ ವಿಸ್ತರಿಸಲು ಸೂಚನೆ ನೀಡಿದರು.
ಮಳೆ ನೀರು ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planningನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.
ಸಾರ್ವಜನಿಕರ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಎಚ್ ಬಿ ಆರ್ ಲೇಔಟ್ ಬಳಿಕ ಗೆದ್ದಲಹಳ್ಳಿಯಲ್ಲಿ ರಾಜಕಾಲುವೆ ಅಗಲ ಮಾಡುವಂತೆ ಸೂಚನೆ ನೀಡಿದ ಸಿದ್ದರಾಮಯ್ಯ, ಶೀಘ್ರವಾಗಿ ಕಾಮಗಾರಿ ಮಾಡುವಂತೆ ಸೂಚನೆ ನೀಡಿದ್ದಾರೆ. ಎಚ್ ಬಿ ಆರ್ ಲೇಔಟ್ ನ ರಾಜಕಾಲುವೆ ಪಕ್ಕ ಬೇಸ್ ಮೆಂಟ್ ನಲ್ಲಿ ನೂರು ಮೀಟರ್ ವರೆಗೂ ಬೇಸ್ ಪಾರ್ಕಿಂಗ್ ಗೆ ಅವಕಾಶ ಕೊಡಬೇಡಿ. ಇದನ್ನ ಟೌನ್ ಪ್ಲಾನಿಂಗ್ ವೇಳೆ ಪರಿಗಣಿಸಿ ಎಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಡ್ಡರಪಾಳ್ಯ, ಗೆದ್ದಲಹಳ್ಳಿ
ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ.
ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ನಿನ್ನೆ ರೈಲ್ವೇಯವರು ವೆಂಟ್ ವಿಸ್ತರಣೆಗೆ BDAಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.
ಸಾಯಿ ಲೇಔಟ್ ನಲ್ಲಿ ಸಿಎಂ, ಡಿಸಿಎಂಗೆ ಘೆರಾವ್
ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಸಿಎಂ, ಡಿಸಿಎಂ ಮಳೆ ನೀರಿನಿಂದ ಜಲಾವೃತಗೊಂಡಿರುವ ಸಾಯಿ ಲೇಔಟ್ ನಲ್ಲಿ ಪರಿಶೀಲನೆಗೆ ತೆರಳಿದ್ರು. ಈ ವೇಳೆ ಸಿಎಂ ಡಿಸಿಎಂಗೆ ಸಾಯಿ ಲೇಔಟ್ ನಿವಾಸಿಗಳಿಂದ ಆಕ್ರೋಶ ಎದುರಾಯ್ತು. ಹಾನಿಗೊಳಗಾದ ಪ್ರದೇಶವನ್ನು ನೋಡಲು ಬಿಡದಂತೆ ತಡೆದ ನಿವಾಸಿಗಳು ಸಿಎಂ, ಡಿಸಿಎಂಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕ ಬೈರತಿ ಬಸವರಾಜ್ ರನ್ನ ಸ್ಥಳೀಯರು ತರಾಟೆ ತಗೆದುಕೊಂಡಿದ್ದಾರೆ.
ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದ ಸಿಎಂ, ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.