ಬೆಂಗಳೂರು:- ಏ.17ರವರೆಗೂ ಕರ್ನಾಟಕದ ಹಲವೆಡೆ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
CSK Vs KKR: ತವರಲ್ಲಿ ಮತ್ತೆ ಮುಗ್ಗರಿಸಿದ ಚೆನ್ನೈ.. CSK ವಿರುದ್ಧ KKRಗೆ 8 ವಿಕೆಟ್ ಗಳ ಜಯ!
ಅದರಂತೆ ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನೂ ನಿನ್ನೆ ಬೆಂಗಳೂರಿನ ಹೆಬ್ಬಾಳ, ರಾಜಾಜಿನಗರ, ಮತ್ತಿಕೆರೆ, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್, ಮಲ್ಲೇಶ್ವರಂ ಹಲವೆಡೆ ವರುಣನ ಆರ್ಭಟಿಸುತ್ತಿದ್ದು, ಯಶವಂತಪುರ ಸೇರಿದಂತೆ ಕೆಲವು ಕಡೆ ತುಂತುರು ಮಳೆಯಾಗುತ್ತಿದೆ. ಇನ್ನೂ ಕೆಲವು ಕಡೆ ಮೋಡ ಕವಿದ ವಾತಾವರಣವಿದೆ.