ಬೀದರ್:- ಬೀದರ್ ನಲ್ಲಿ ಮಳೆ ಆರ್ಭಟ ಜೋರಾಗಿದ್ದು, ಬೃಹತ್ ಮರ ನೆಲಕ್ಕುರುಳಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬೃಹತ್ ಮರವೊಂದು ಧರೆಗುರುಳಿ ರಸ್ತೆ ಸಂಚಾರಕ್ಕೆ ಅಡಚಡೆಯಾಗಿರುವ ಘಟನೆ ಔರಾದ್ ತಾಲೂಕಿನ ಜೋಜನಾ ಗ್ರಾಮದ ಬಳಿ ನಡೆದಿದೆ.
ಅಕಾಲಿಕ ಮಳೆಗೆ ಹಲವು ಮರಗಳು ರಸ್ತೆಗುರುಳಿದ ಪರಿಣಾಮ ಸಂತಪೂರ್ದಿಂದ ಜೋಜನಾ ಗ್ರಾಮದ ನಡುವೆ ರಸ್ತೆ ಸಂಚಾರ ಕೆಲವು ಹೊತ್ತು ಬಂದ್ ಆಗಿತ್ತು.
ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜಿಲ್ಲೆಯ ಜನರಿಗೆ ವರುಣ ತಂಪೆರೆದಿದ್ದು, ಔರಾದ್, ಬೀದರ್, ಬಸವಕಲ್ಯಾಣ, ಭಾಲ್ಕಿ, ಕಮಲನಗರ ಸೇರಿದಂತೆ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ.