ಬೆಳಗಾವಿ: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ ಏನೋ ಮಾಡಿದ್ದಾರೆ. ಆದರೆ ಅವರ ಜೊತೆಗಿದ್ದ ಮತ್ತೊಬ್ಬ ನಾಯಕ ರಮೇಶ್ ಜಾರಕಿಹೊಳಿ ಮಾತ್ರ ಯತ್ನಾಳ್ ಹೊಸ ಪಕ್ಷ ಕಟ್ಟಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಹೊಸ ಪಕ್ಷ ಸ್ಥಾಪಿಸುವ ಮಾತುಗಳು ಊಹಾಪೋ. ಯತ್ನಾಳ ಅವರು ಬಿಜೆಪಿಯನ್ನು ಬಿಟ್ಟುಹೋಗುವುದಿಲ್ಲ, ಪಕ್ಷದಲ್ಲೇ ಮುಂದುವರೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯತ್ನಾಳ ಅವರು ಹೊಸ ಪಕ್ಷದ ಬಗ್ಗೆ ಹೇಳಿದ್ದ ಉದ್ದೇಶ ವಿಭಿನ್ನವಾಗಿದೆ. ಮಾಧ್ಯಮಗಳಲ್ಲಿ ಬಂದಿರುವ ವರದಿಗಳು ಅಸಂಗತವಾಗಿವೆ. ಹಿಂದೂತ್ವದ ಆದರ್ಶಗಳಿಗಾಗಿ ಯತ್ನಾಳ ಹೊಸ ಪಕ್ಷ ಕಟ್ಟುವ ಸಾಧ್ಯತೆಯ ಬಗ್ಗೆ ಚರ್ಚೆಗಳು ನಡೆದಿದ್ದವು ಎಂದರು.