ಬೆಂಗಳೂರು:- 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ.
18 ವರ್ಷಗಳ ವನವಾಸಕ್ಕೆ ಮುಕ್ತಿ: ಕಪ್ ಗೆದ್ದ ಬೆನ್ನಲ್ಲೇ ನಿವೃತ್ತಿ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ವಿರಾಟ್!
ಈ ಟ್ರೋಫಿ ಗೆದ್ದ ಬೆನ್ನಲ್ಲೇ ದೇಶದೆಲ್ಲೆಡೆ ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ. ಅದರಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ RCB ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದಾರೆ. ಆರ್ ಸಿಬಿ ಐಪಿಎಲ್ ಪಂದ್ಯಾವಳಿಯಲ್ಲಿ ಜಯಭೇರಿ ಹಿನ್ನೆಲೆ.. ಸಂಭ್ರಮಾಚರಣೆ ಮಾಡುತ್ತಾ ಬಾರ್ ಗೆ ತೆರಳುವಾಗ ಯುವಕನಿಗೆ ಚಾಕು ಇರಿದಿರುವ ಆರೋಪ ಕೇಳಿ ಬಂದಿದೆ. ಕುತ್ತಿಗೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಈ ಘಟನೆ ಪೀಣ್ಯಾದ ಜಾಲಹಳ್ಳಿ ಕ್ರಾಸ್ ಬಳಿ ಜರುಗಿದೆ.
ಅದೃಷ್ಟವಶಾತ್ ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರತಿರೋಧ ಬಳಿಕ ಘಟನಾ ಸ್ಥಳದಿಂದ ಗ್ಯಾಂಗ್ ಕಾಲ್ಕಿತ್ತಿದೆ. ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ಯುವಕನನ್ನು ದಾಖಲು ಮಾಡಲಾಗಿದೆ. ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.