ಬೆಂಗಳೂರು: ಆರ್ ಸಿಬಿ ವಿಜೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಭವಿಸಿತ್ತು. ಈ ಸಂಬಂಧ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಶಮಂತ್ ಮಾವಿನಕೆರೆ ಅವರನ್ನು ಪೊಲೀಸರು ಬಂಧಿಸಿದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಖಿಲ್ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆರೋಪಿಗಳು ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ನ್ಯಾ.ಎಸ್.ಆರ್. ಕೃಷ್ಣಕುಮಾರ್ ಪೀಠ ಷರತ್ತು ವಿಧಿಸಿ, ಮಧ್ಯಂತರ ಜಾಮೀನು ನೀಡಿದೆ.
ತಮ್ಮ ಬಂಧನವನ್ನು ಕಾನೂನುಬಾಹಿರ ಎಂದು ಆರೋಪಿಸಿ ನಿಖಿಲ್ ಸೋಸಲೆ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಪೊಲೀಸ್ ಕ್ರಮವು ರಾಜಕೀಯ ನಿರ್ದೇಶನಗಳಿಂದ ಪ್ರಭಾವಿತವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಸಂಬಂಧ ವಿಚಾರಣೆ ನಡೆಸಿ ಕೋರ್ಟ್ ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ, ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ನ ನಿರ್ದೇಶಕ ಸುನೀಲ್ ಮ್ಯಾಥ್ಯೂ, ಡಿಎನ್ಎ ಮ್ಯಾನೇಜರ್ ಕಿರಣ್ ಕುಮಾರ್ ಮತ್ತು ಸಮಂತ್ ಮಾವಿನಕೆರೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಮಧ್ಯಂತರ ಮನವಿ ಕುರಿತ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಪೀಠ್ ಮಧ್ಯಂತರ ಜಾಮೀನು ನೀಡಿದೆ.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 6ರಂದು ಆರ್ಸಿಬಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯು, ಕಿರಣ್ ಮತ್ತು ಸುಮಂತ್ ಎಂಬುವವರನ್ನು ಕೇಂದ್ರ ಅಪರಾಧ ದಳ (CCB) ಬಂಧಿಸಿದೆ. ಬಳಿಕ ಆರೋಪಿಗಳನ್ನು ನಗರದ 41ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳನ್ನು ಜೂನ್ 19 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು. ಬಳಿಕ ಪೊಲೀಸರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು.