ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಮ್ಯಾಚ್ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಫೈನಲ್ ಮ್ಯಾಚ್ ವೀಕ್ಷಿಸಿ ರಿಲ್ಯಾಕ್ಸ್ ಆಗ್ತಿದ್ದಾರೆ. ಗದಗ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ಇಂದು ರಾತ್ರಿ ಬೆಂಗಳೂರಿಗೆ ವಾಪಸ್ ಆದರು. ಬೆಂಗಳೂರಿನ HAL ವಿಮಾನ ನಿಲ್ದಾಣದಿಂದ ನಿವಾಸಕ್ಕೆ ಬರುವವರೆಗೂ ಕಾರಿನಲ್ಲಿ ಮ್ಯಾಚ್ ವೀಕ್ಷಣೆ ಮಾಡಿದರು. ಟ್ಯಾಬ್ನಲ್ಲಿ ಐಪಿಎಲ್ ಪಂದ್ಯ ವೀಕ್ಷಣೆ ಮಾಡುವ ಮೂಲಕ ರಿಲ್ಯಾಕ್ಸ್ ಆದರು.
ನಿತ್ಯ ಬೆಳಿಗ್ಗೆ ಎದ್ದಾಕ್ಷಣ ತಲೆನೋವು ಬರುತ್ತಾ!? ಹಾಗಿದ್ರೆ ಇದು ಈ ಕಾಯಿಲೆಯ ಸಂಕೇತ!
ಸಿಎಂ ಸಿದ್ದರಾಮಯ್ಯ ಕ್ರಿಕೆಟ್ ಅಭಿಮಾನಿ. ಐಪಿಎಲ್ ಸಂದರ್ಭದಲ್ಲಿ ಬೆಂಗಳೂರಲ್ಲಿ ನಡೆಯುವ ಕೆಲವು ಪಂದ್ಯಗಳ ವೀಕ್ಷಣೆ ಮಾಡಲು ಸ್ಟೇಡಿಯಂಗೆ ಬರುತ್ತಾರೆ. ಅಂತಾರಾಷ್ಟ್ರೀಯ ಪಂದ್ಯಗಳು ಬೆಂಗಳೂರಲ್ಲಿ ನಡೆದಾಗಲೂ ಸ್ಟೇಡಿಯಂನಲ್ಲಿ ಕೂತು ಮ್ಯಾಚ್ ವೀಕ್ಷಣೆ ಮಾಡುತ್ತಾರೆ. ಇನ್ನು, ಡಿಸಿಎಂ ಡಿಕೆ ಶಿವಕುಮಾರ್, ಸದಾಶಿವನಗರದ ನಿವಾಸದಲ್ಲಿ ಫೈನಲ್ ಮ್ಯಾಚ್ ವೀಕ್ಷಣೆ ಮಾಡಿದರು.