ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಇಂದು ಹೈವೋಲ್ಟೇಜ್ ಮ್ಯಾಚ್ ನಡೆಯಲಿದೆ. ಮೊದಲಿಗೆ ಟಾಸ್ ಗೆದ್ದಿರುವ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಮೊದಲಿಗೆ ಪಂಜಾಬ್ ಬ್ಯಾಟಿಂಗ್ ಮಾಡಲಿದೆ.
ನಾಳೆ ಭಾರತಕ್ಕೆ ಭೇಟಿ ಕೊಡಲಿದ್ದಾರೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್!
ಬ್ಯಾಕ್ ಟು ಬ್ಯಾಕ್ ಪಂದ್ಯ ಆಡುತ್ತಿರುವ ಉಭಯ ತಂಡಗಳು ಗೆಲುವಿಗಾಗಿ ಸೆಣಸಾಡಲಿದೆ. ಶುಕ್ರವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಇದರಲ್ಲಿ ತವರಲ್ಲೇ ಆರ್ ಸಿಬಿ ಹೀನಾಯವಾಗಿ ಸೋತಿತ್ತು. 14 ಓವರ್ ಗಳ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಉತ್ತಮ ಬೌಲಿಂಗ್ ಹಾಗೂ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ತಂಡವನ್ನು ಮಣಿಸಿತ್ತು. ಇನ್ನೂ ಕಳೆದ ಪಂದ್ಯದ ಸೋಲಿನ ರುಚಿ ಕಂಡಿರುವ ಬೆಂಗಳೂರು ತಂಡವು, ಇಂದು ತನ್ನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಆರ್ ಸಿಬಿ ಮತ್ತೆ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯವು ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ವೇಗದ ಬೌಲರ್ ಗಳನ್ನು ಗಣನೆಗೆ ತೆಗೆದುಕೊಂಡರೆ ಆರ್ ಸಿಬಿಯಲ್ಲಿ ಜೋಶ್ ಹೇಜಲ್ವುಡ್, ಭುವನೇಶ್ವರ್ ಕುಮಾರ್, ಯಶ್ ದಯಾಳ್ ಮೊದಲಾದ ಉತ್ತಮ ಬೌಲರ್ ಗಳಿದ್ದಾರೆ. ಆದರೆ ಸ್ಪಿನ್ನರ್ ಗಳ ವಿಚಾರಕ್ಕೆ ಬಂದಲ್ಲಿ ಯುಜುವೇಂದ್ರ ಚಹಲ್ ರೀತಿಯಲ್ಲಿ ಕೃನಾಲ್ ಪಾಂಡ್ಯ, ಲಿಯಾಮ್ ಲಿವಿಂಗ್ ಸ್ಟೋನ್ ಯಶಸ್ಸು ತಮ್ಮದಾಗಿಸಿಕೊಳ್ಳುವರೇ ಎಂಬುದೇ ಕುತೂಹಲದ ಸಂಗತಿ. ಪಂಜಾಬ್ ವಿರುದ್ಧ ಈ ಪಂದ್ಯ ಗೆಲ್ಲುತ್ತಾ ಕಾದು ನೋಡಬೇಕಾಗಿದೆ.