ಚಂಢೀಗಢ ಮುಲ್ಲನ್ಪುರದಲ್ಲಿ ಇಂದು ಆರ್ ಸಿಬಿ-ಪಂಜಾಬ್ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ.
ಹೆಂಡತಿ ಜೊತೆ ಅಕ್ರಮ ಸಂಬಂಧ ಶಂಕೆ: ಡ್ರೈವರ್ ಕಿಡ್ನ್ಯಾಪ್ ಮಾಡಿ ಹಲ್ಲೆ.. ರೌಡಿಶೀಟರ್ ಆ್ಯಂಡ್ ಗ್ಯಾಂಗ್ ಅರೆಸ್ಟ್!
ಆರ್ ಸಿಬಿ ಈವರೆಗೆ ಆಡಿರುವ 7 ಪಂದ್ಯಗಳಲ್ಲಿ ಮೂರು ಪಂದ್ಯಗಳು ತವರಿನಲ್ಲಿ ನಡೆದಿದ್ದು ಸೋಲು ಕಂಡರೆ, ತವರಿನ ಹೊರಗೆ ಆಡಿರುವ ನಾಲ್ಕೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾನುವಾರ ನಡೆಯಲಿರುವ ಪಂದ್ಯ ಕೂಡ ತವರಿನ ಹೊರಗೆ ನಡೆಯುತ್ತಿದ್ದು ಬೆಂಗಳೂರು ಸೋಲಿಗೆ ಸೇಡು ತೀರಿಸಿಕೊಳ್ಳುವ ವಿಶ್ವಾಸದಲ್ಲಿದೆ.
ಶುಕ್ರವಾರ ನಡೆದ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಬದಲಾಗಿ ಮನೋಜ್ ಭಾಂಡಗೆ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದರು. ಆದರೆ ಕೇವಲ 1 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದರು. ಭಾನುವಾರ ನಡೆಯುವ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ವಾಪಸಾತಿ ಮಾಡಲಿದ್ದಾರೆ.
7 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ಲಿಯಾಮ್ ಲಿವಿಂಗ್ಸ್ಟೋನ್ ಭಾನುವಾರ ನಡೆಯುವ ಪಂದ್ಯದಲ್ಲಿ ಬೆಂಚ್ ಕಾಯುವ ಸಾಧ್ಯತೆ ಇದೆ. ಅವರ ಬದಲಾಗಿ ಇಂಗ್ಲೆಂಡ್ನ ಮತ್ತೊಬ್ಬ ಸ್ಪೋಟಕ ಆಲ್ರೌಂಡರ್ ಜೇಕಬ್ ಬೆಥೆಲ್ ಆಡುವ ಸಾಧ್ಯತೆ ಇದೆ. ಅಥವಾ ವೆಸ್ಟ್ ಇಂಡೀಸ್ನ ರೊಮಾರಿಯೋ ಶೆಫರ್ಡ್ ಅವರು ಅವಕಾಶ ಪಡೆದರೂ ಅಚ್ಚರಿ ಪಡಬೇಕಿಲ್ಲ.
ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದೆ. ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಬಾರಿ ಐಪಿಎಲ್ನಲ್ಲಿ ಮೂರು ಪಂದ್ಯಗಳು ನಡೆದಿವೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಎರಡು ಬಾರಿ 200ಕ್ಕಿಂತ ಹೆಚ್ಚು ರನ್ ಗಳಿಸಿವೆ. ಆದರೆ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಈ ಅಂಗಳದಲ್ಲಿ 111 ರನ್ಗಳನ್ನು ಯಶಸ್ವಿಯಾಗಿ ಡಿಫೆಂಡ್ ಮಾಡಿಕೊಂಡಿತ್ತು. ಈ ಆವೃತ್ತಿಯಲ್ಲಿ ಇದು ಮೊದಲ ಮಧ್ಯಾಹ್ನದ ಪಂದ್ಯವಾಗಿದ್ದು ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚಿನ ಅನುಕೂಲವಾಗುವ ಸಾಧ್ಯತೆ ಇದೆ. ಪಂಜಾಬ್ ಕಿಂಗ್ಸ್ಗೆ ಇದು ಇಲ್ಲಿ ಕೊನೆಯ ಪಂದ್ಯವಾಗಿದ್ದು ಇದಾದ ಬಳಿಕ ಧರ್ಮಶಾಲಾದಲ್ಲಿ ಪಂದ್ಯಗಳನ್ನು ಆಡಲಿದೆ.