ವಿಜಯನಗರ : ಮೋದಿ, ಅಮಿತ್ ಷಾ, ಕೇಂದ್ರ ಸರ್ಕಾರ ನನಗೆ ಅವಕಾಶ ನೀಡಲಿ, ನಾನು ಯುದ್ಧಕ್ಕೆ ಹೋಗಲು ಸಿದ್ಧ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಎದೆ ತಟ್ಟಿ ಹೇಳಿದ್ದಾರೆ.
ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಎಂದಿಗೂ ನಮಗೆ ಸಂಬಂಧವಿಲ್ಲ. ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು ದೇಶನೇ. ಕೇಂದ್ರ ಸರ್ಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ, ಮೋದಿ, ಅಮಿತ್ ಷಾ ಮತ್ತು ಕೇಂದ್ರ ಸರ್ಕಾರ ನನಗೆ ಅವಕಾಶ ಕೊಡಲಿ, ನಾನು ಯುದ್ಧ ಮಾಡೋದಕ್ಕೆ ಸಿದ್ಧ ಎಂದರು.
ಇನ್ನೂ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಕೊಲೆ ಪ್ರಕರಣವಾಗಿ ಮಾತನಾಡಿ, ಕೊಲೆಯಾಗಿದೆ, ಕೊಲೆಯಾಗಬಾರದಾಗಿತ್ತು ಸತ್ತಿರೋರು ರೌಡಿ ಶೀಟರ್ ಅಂತೆ. ಹಿಂದೆ ಕೊಲೆ ಕೇಸ್ ನಲ್ಲಿದ್ರಂತೆ, ಪೊಲೀಸರು ತನಿಖೆ ಮಾಡುತ್ತಾರೆ. ಪ್ರತಿಯೊಬ್ಬರ ಜೀವವೂ ಅಮೂಲ್ಯವೇ , ಕೊಲೆಯಾಗಬಾರದಾಗಿತ್ತು. ಬಿಜೆಪಿಯವರಿಗೆ ಎಲ್ಲದ್ರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಕಿಡಿಕಾರಿದರು.
ಇನ್ನೂ ಸಚಿವ ಶಿವಾನಂದ ಪಾಟೀಲ್ ಮತ್ತು ಯತ್ನಾಳ್ ರಾಜೀನಾಮೆ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಯತ್ನಾಳ್ ಅವರು, ಯಾವಾಗಲೂ ದಮ್ಮು, ತಾಕತ್ತು ಅಂತ ಮಾತಾಡುತ್ತಾರೆ. ಪದೇ, ಪದೇ, ದಮ್ಮು ತಾಕತ್ತು ಬಗ್ಗೆ ಮಾತನಾಡುತ್ತಾರೆ.. ಸಚಿವ ಶಿವಾನಂದ ಪಾಟೀಲ್, ದಮ್ಮು ತಾಕತ್ತು ತೋರಿಸಿದ್ದಾರೆ . ಅವರಪ್ಪಗೆ ಹುಟ್ಟಿದವರಾದ್ರೆ, ರಾಜೀನಾಮೆ ಕೊಟ್ಟು ಬರಲಿ ಅಂತ ಯತ್ನಾಳ್ ಹೇಳ್ತಾರೆ ಶಿವಾನಂದ್ ಪಾಟೀಲ್ ರಾಜಿನಾಮೆ ಕೊಟ್ಟು ಅವರಪ್ಪಗೆ ಹುಟ್ಟಿದ್ದಾರೆ ಅಂತ ತೋರಿಸಿದ್ದಾರೆ. ಅದೇ ಯತ್ನಾಳ್ ರಾಜೀನಾಮೆ ನೀಡಿ, ಅವರಪ್ಪಗೆ ಹುಟ್ಟಿದ್ದಾರೆ ಅಂತ ತೋರಿಸಲಿ ಎಂದು ಸವಾಲ್ ಹಾಕಿದರು.