ಚಿತ್ರದುರ್ಗ:- ಬೆಲೆ ಕುಸಿತದಿಂದ ಕಂಗಾಲಾದ ರೈತರು ಟೊಮೆಟೊ ಬೆಳೆಯನ್ನು ಕಟಾವು ಮಾಡದೇ ಹೊಲದಲ್ಲೇ ಬಿಟ್ಟಿದ್ದಾರೆ.
ರಾಜ್ಯದಲ್ಲಿ ಮುಸ್ಲಿಮರು ಬಿಟ್ಟು ಬೇರೆ ಯಾರು ಸುರಕ್ಷಿತ ಇಲ್ಲ- ಅರವಿಂದ ಬೆಲ್ಲದ್
ಕೋಟೆನಾಡು ಚಿತ್ರದುರ್ಗದಲ್ಲಿ ಟೊಮೆಟೊದಿಂದ ಅಪಾರ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಟೊಮೆಟೊ ಬೆಲೆ ಕುಸಿತದಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ತಾಲೂಕಿನ ಸಜ್ಜನಕೆರೆ ಗ್ರಾಮದ ರೈತರು ಯಾವುದೇ ಬೆಳೆ ಬೆಳೆದರೂ ಒಂದಲ್ಲ, ಒಂದು ರೀತಿಯಲ್ಲಿ ನಷ್ಟ ಅನುಭವಿಸುವಂತಾಗಿದೆ. ಹೀಗಾಗಿ ಈ ಬಾರಿ ಟೊಮೆಟೊ ಬೆಳೆದು ಅಪಾರ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಉತ್ತಮ ಇಳುವರಿ ಬಂದರೂ ಕೂಡ ಟೊಮೆಟೊ ಬೆಲೆ ಕುಸಿತದಿಂದಾಗಿ ಮತ್ತೆ ಅನ್ನದಾತರು ಸಾಲ ಶೂಲಕ್ಕೆ ಸಿಲುಕುವಂತಾಗಿದೆ.
25 ಕೆ.ಜಿಯ ಟೊಮೆಟೊ ಬಾಕ್ಸ್ಗೆ ಕೇವಲ 20 ರೂ.ಗೆ ಮಾರಾಟವಾಗುತ್ತಿದೆ. ಇದರಿಂದ ಸಾಗಾಣೆ ವೆಚ್ಚ ಹಾಗೂ ಕೂಲಿಯ ಹಣವೂ ರೈತರ ಕೈಗೆ ಸಿಗುತ್ತಿಲ್ಲ. ಹೀಗಾಗಿ ಟೊಮೆಟೊವನ್ನು ಕಟಾವು ಮಾಡದೇ ಗಿಡದಲ್ಲೇ ಬಿಟ್ಟು ರೈತರು ಆಕ್ರೋಶ ಹೊರಹಾಕಿದ್ದಾರೆ