ಮಂಡ್ಯ:- ರಸ್ತೆ ಅಪಘಾತದಲ್ಲಿ ದಂಪತಿಗಳಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಗ್ರಾಮದ ಬಳಿ ಜರುಗಿದೆ.
IPL 2025: ಸೂಪರ್ ಓವರ್ನಲ್ಲಿ ಆರ್ಆರ್ ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್!
ಶ್ವೇತಾರನ್ನು (38) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿದರಕ, ಗ್ರಾಮದ ನಾಗರಾಜುಗೆ (45) ಮದುವೆ ಮಾಡಿಕೊಡಲಾಗಿತ್ತು. ಇಬ್ಬರೂ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಗ್ರಾಮದಲ್ಲಿ ಜಾತ್ರೆ ಇದ್ದ ಕಾರಣ ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಕದಬಹಳ್ಳಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋಗಿದ್ದು, ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ನಾಗಮಂಗಲ ತಾಲೂಕಿನ ಬಿಂಡಿಗನ ನವಿಲೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.