ಬೆಂಗಳೂರು:- ತಾಲೂಕಿನ ತೊಣಚಿನಕುಪ್ಪೆ ಪ್ರವಾಸಿ ಡಾಬಾದ ಬಳಿ KSRTC ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಜರುಗಿದೆ. ಮೃತ ವ್ಯಕ್ತಿಯನ್ನು ಓಬಳಾರೆಡ್ಡಿ ಎಂದು ಗುರುತಿಸಲಾಗಿದೆ.
ವೇಗವಾಗಿ ಬಂದ ಕಾರು ಹಿಂಬದಿಯಿಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓಬಳಾರೆಡ್ಡಿ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಸುನಿಲ್ ಮತ್ತು ದಿವ್ಯ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.