Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೋಹಿತ್ ಶರ್ಮಾ ಬಹುಶಃ ಇಡೀ ವಿಶ್ವದಲ್ಲೇ ಅತ್ಯಂತ ನತದೃಷ್ಟ ವ್ಯಕ್ತಿ: ಹೇಳಿದವರ್ಯಾರು?

    By AIN AuthorNovember 21, 2023
    Share
    Facebook Twitter LinkedIn Pinterest Email
    Demo

    ಅಹಮದಾಬಾದ್: ತಮ್ಮ ಸಿಡಿಲಬ್ಬರದ ಶತಕ (137 ರನ್) ದಿಂದ ಆಸ್ಟ್ರೇಲಿಯಾಕ್ಕೆ 6 ವಿಕೆಟ್ ಗಳ‌ ಗೆಲುವು ತಂದುಕೊಡುವಲ್ಲಿ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮಹತ್ತರ ಪಾತ್ರ ವಹಿಸಿದ್ದರು.‌ ಇದರಿಂದ ಕಾಂಗರೂ ಪಡೆ‌ 6ನೇ ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ತಮ್ಮ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದಿಂದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಹೆಡ್, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾರನ್ನು ವಿಶ್ವದ ಅತ್ಯಂತ ನತದೃಷ್ಟ ವ್ಯಕ್ತಿ ಎಂದು ಕರೆದಿದ್ದಾರೆ.

    ಟೀಮ್ ಇಂಡಿಯಾ ನೀಡಿದ 241 ರನ್ ಗಳ ಸಾಧಾರಣ ಗುರಿಯನ್ನು ಹಿಂಬಾಲಿಸಿದ ಆಸ್ಟ್ರೇಲಿಯಾ,47 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸೋಲಿನತ್ತ ಹೆಜ್ಜೆ ಹಾಕಿತ್ತು. ಆದರೆ ಸಿಡಿಲಬ್ಬರದ ಆಟಗಾರ ಟ್ರಾವಿಸ್ ಹೆಡ್ 137 ರನ್ ಗಳಿಸುವ ಮೂಲಕ ಕಾಂಗರೂ ಪಡೆಯಲ್ಲಿ ಗೆಲುವಿನ ಆಸೆ ಚಿಗುರಿಸಿದರು. 4 ನೇ ವಿಕೆಟ್ ಗೆ ಟ್ರಾವಿಸ್ ಹೆಡ್ ಜೊತೆಗೂಡಿದ ಮಾರ್ನಸ್ ಲ್ಯಾಬುಶೇನ್ (58* ರನ್) 192 ರನ್ ಗಳ ಕಾಣಿಕೆಯನ್ನು ನೀಡಿದರು. 43ನೇ ಓವರ್ ನಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಗೆ ಹೆಡ್ ವಿಕೆಟ್ ಒಪ್ಪಿಸಿದರೂ ತಂಡದ ಗೆಲುವಿಗೆ 2 ರನ್ ಅವಶ್ಯಕತೆ ಇತ್ತು.

    ಯಾರೂ ನಿರೀಕ್ಷಿಸಿರದ ದಿನ: ಟ್ರಾವಿಸ್ ಹೆಡ್

    15 ಮನಮೋಹಕ ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ನೆರವಿನಿಂದ 120 ಎಸೆತಗಳಲ್ಲೇ 137 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದ ಟ್ರಾವಿಸ್ ಹೆಡ್, ಟೀಮ್ ಇಂಡಿಯಾದ ಇನಿಂಗ್ಸ್ ವೇಳೆ ರೋಹಿತ್ ಶರ್ಮಾ ಅವರ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಅತಿಥೇಯರ ಬ್ಯಾಟಿಂಗ್ ಬಲವನ್ನು ಮುರಿದಿದ್ದರು. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆಯಲ್ಲಿ ಇದೊಂದು ಅನಿರೀಕ್ಷಿತ ದಿನವಾಗಿದೆ ಎಂದು ಹೆಡ್ ಹೇಳಿದ್ದಾರೆ.

    “ಆತ (ರೋಹಿತ್ ಶರ್ಮಾ) ಬಹುಶಃ ವಿಶ್ವದ ಅತ್ಯಂತ ನತದೃಷ್ಟ ವ್ಯಕ್ತಿ ಆಗಿರುವ ಎಲ್ಲ ಸಾಧ್ಯತೆಗಳೂ ಇವೆ. ರೋಹಿತ್ ಶರ್ಮಾ ಅವರ ಕ್ಯಾಚ್ ಪಡೆದಿದ್ದು ಉತ್ತಮ ಕೆಲಸವಾಗಿದೆ. ಇಲ್ಲದಿದ್ದರೆ ಆತ ಶತಕ ಗಳಿಸುತ್ತಿದ್ದರೆನೋ ಗೊತ್ತಿಲ್ಲ,” ಎಂದು ಹೆಡ್ ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿನ ಕಾಲ್ತುಳಿತ ಪ್ರಕರಣ: ಭಾರೀ ಟ್ರೆಂಡಿಂಗ್ ನಲ್ಲಿದೆ #ArrestKohli..!

    June 6, 2025

    RCB Victory Parade Stampede: ನಿಖಿಲ್ ಸೋಸಲೆ ಯಾರು?.. ಅವರಿಗೂ RCBಗೂ ಏನು ಸಂಬಂಧ?

    June 6, 2025

    RCB Stampede: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: RCB ವಿರುದ್ಧ ಪ್ರಕರಣ ದಾಖಲು!

    June 6, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಸೈಲೆಂಟಾಗಿ ಎಸ್ಕೇಪ್ ಆಗುತ್ತಿದ್ದ RCB ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಅರೆಸ್ಟ್!

    June 6, 2025

    ಕಾಲ್ತುಳಿತ ಕೇಸ್: ಕಮಿಷನರ್ ದಯಾನಂದ್ ಸಸ್ಪೆಂಡ್.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ; ಯಾರ್ಯಾರು, ಏನಂದ್ರು?

    June 6, 2025

    I Stand with B Dayanand: ಸೋಷಿಯಲ್ ಮೀಡಿಯಾದಲ್ಲಿ ದಯಾನಂದ್ ಗೆ ಭಾರೀ ಬೆಂಬಲ.. ಹಲವು ಪೋಸ್ಟ್ ಗಳು ವೈರಲ್!

    June 6, 2025

    ಕಾಲ್ತುಳಿತ ಕೇಸ್: ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ ದಾಖಲಾಯ್ತು FIR!

    June 5, 2025

    Stampede: ಕಾಲ್ತುಳಿತದಲ್ಲಿ 11 ಜನರ ಸಾವು: ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ RCB!

    June 5, 2025

    ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಸಂತಾಪಗಳು – ಬಿಸಿಸಿಐ

    June 5, 2025

    Kuldeep Yadav: ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್ ಯಾದವ್!

    June 5, 2025

    ಕಾಲ್ತುಳಿತದಲ್ಲಿ ಆರ್ ಸಿಬಿ ಅಭಿಮಾನಿಗಳು ಸಾವು: ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು?

    June 5, 2025

    ಕಾಲ್ತುಳಿತ ಪ್ರಕರಣ: ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ ಗೊತ್ತಾ!?

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.