ನೆಲಮಂಗಲ: ಎರಡು ಸ್ಕೂಲ್ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಒಂದು ಬಸ್ ಪಲ್ಟಿ ಹೊಡೆದಿರುವ ಘಟನೆ ಮಾದನಾಯಕನಹಳ್ಳಿ ಬಳಿಯ ಮಾದಾವಾರದ ನೈಸ್ ರಸ್ತೆಯ ಪಿಕಾಕ್ ಬಡಾವಣೆಯಲ್ಲಿ ಜರುಗಿದೆ.
ಹುಬ್ಬಳ್ಳಿ ತಾಲೂಕ ಗ್ರಾಮೀಣ ಘಟಕದ ಮಹಿಳಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ!
ಬೆಂಗಳೂರು ಉತ್ತರ ತಾಲೂಕಿನ ಡೆಲ್ಲಿ ಪಬ್ಲಿಕ್ ಶಾಲೆಯ ವಾಹನ ಪಲ್ಟಿ ಆಗಿದ್ದು, ಅದೃಷ್ಟವಶಾತ್ ಶಾಲಾ ಪುಟಾಣಿ ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಾಲಾ ಬಸ್ ಚಾಲಕರ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ. ಕೆಲ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪೋಷಕರು ಘಟನೆಯಿಂದ ಆತಂಕದಲ್ಲಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.