ಗದಗ: ಶಾಲೆಯ ಮೇಲ್ಛಾವಣಿ ಕಾಂಕ್ರೀಟ್ ಪ್ಲಾಸ್ಟರ್ ಕುಸಿದು 5 ಜನ ವಿದ್ಯಾರ್ಥಿಗಳು, ಓರ್ವ ಶಿಕ್ಷಕನಿಗೆ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದ ಶಾಲೆಯಲ್ಲಿ ನಡೆದಿದೆ.
6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳ ತಲೆ, ಕೈ, ಕಾಲು, ಮುಖಕ್ಕೆ ಗಾಯಗಳಾಗಿವೆ. ಗಾಯಾಳು ಮಕ್ಕಳು ಹಾಗೂ ಶಿಕ್ಷಕರನ್ನು ಕೂಡಲೇ ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು, ಮಾಹಿತಿ ಇದ್ದರೂ ಶಿಕ್ಷಣ ಇಲಾಖೆಯಿಂದ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.