ಬೆಂಗಳೂರು:- ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನ ಮುಂದಿನ ಕಮಿಷನರ್ ಯಾರಾಗ್ತಾರೆ!? ಈ ಇಬ್ಬರಲ್ಲಿ ಒಬ್ಬರು ಫಿಕ್ಸ್!?
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಈ ಬೆನ್ನಲ್ಲೇ ರಾತ್ರೋ ರಾತ್ರಿ ಬೆಂಗಳೂರು ನಗರ ನೂತನ ಕಮಿಷನರ್ ಆಗಿ ಸೀಮಂತ್ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇನ್ನೂ ಜಾರ್ಖಂಡ್ ಮೂಲದವರಾದ ಸೀಮಂತ್ ಕುಮಾರ್ ಸಿಂಗ್ 1996ರ ಬ್ಯಾಚ್ ನ ಐಪಿಎಸ್ ಅಧಿಕಾರಿ. ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದವರು ಸೀಮಂತ್ ಕುಮಾರ್ ಸಿಂಗ್. 2000ದಿಂದ 2004ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆ ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿಯೂ ಕೆಲಸ ಮಾಡಿದ್ದಾರೆ.