ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಿಢೀರ್ ಅಸ್ವಸ್ಥೆತೆಯಿಂದ ಆಸ್ಪತ್ರೆಗೆ ದಾಖಲಾದರು. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿತ್ತು.
ಈ ಮಾಹಿತಿಯನ್ನು ಗಂಗಾ ರಾಮ್ ಆಸ್ಪತ್ರೆ ಆಡಳಿತ ನೀಡಿದೆ. ಜೂನ್ 7 ರಂದು ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಶಿಮ್ಲಾಕ್ಕೆ ಕರೆದೊಯ್ಯಲಾಯಿತು. ಕೆಲವು ಸಮಯದಿಂದ ಸೋನಿಯಾ ಗಾಂಧಿಯವರ ಅನಾರೋಗ್ಯದ ವರದಿಗಳು ಹೊರಬರುತ್ತಿವೆ. ಆದಾಗ್ಯೂ, ಈ ನಿಟ್ಟಿನಲ್ಲಿ ಯಾವುದೇ ನಿರ್ದಿಷ್ಟ ಮಾಹಿತಿ ಹೊರಬಂದಿಲ್ಲ.
ನೀವು ಕೂಡ ಜಾಸ್ತಿ ಉಪ್ಪಿನಕಾಯಿ ತಿಂತೀರಾ!? ಹಾಗಿದ್ರೆ ಈ ಸಮಸ್ಯೆಗಳು ಗ್ಯಾರಂಟಿ!
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಸಲಹೆಗಾರರು ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅಧಿಕ ರಕ್ತದೊತ್ತಡವಿತ್ತು ಎಂದು ಹೇಳಿದ್ದಾರೆ.
ಶಿಮ್ಲಾದ ಆಸ್ಪತ್ರೆಯಲ್ಲಿ ಅವರ ನಿಯಮಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಅಧಿಕ ರಕ್ತದೊತ್ತಡದ ಇದ್ದ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಿಎಂ ಸುಖು ಅವರ ಮಾಧ್ಯಮ ಸಲಹೆಗಾರ ನರೇಶ್ ಚೌಹಾಣ್ ಸುದ್ದಿ ಸಂಸ್ಥೆಗೆ ತಿಳಿಸಿದ್ದರು. ಇದು ಸಾಮಾನ್ಯ ತಪಾಸಣೆಯಾಗಿತ್ತು. ಇದಾದ ನಂತರ ಅವರು ತಮ್ಮ ಮನೆಗೆ ಮರಳಿದರು ಎಂದು ಮಾಹಿತಿ ನೀಡಿದ್ದಾರೆ.