ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಟ್ರಾಫಿಕ್ ವೇಳೆ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕಡೆ ತೆರಳುತ್ತಿದ್ದ 4 ಕಾರುಗಳ ನಡುವೆ ಅಪಘಾತವಾಗಿದೆ. ಸಂಜೆ ಸುಮಾರು 6:30ರ ವೇಳೆಗೆ ಘಟನೆ ನಡೆದಿದೆ. ಸದ್ಯ ಪ್ರಾಣಾಪಾಯದಿಂದ ಚಾಲಕರು ಮತ್ತು ಸವಾರರು ಪಾರಾಗಿದ್ದಾರೆ
ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲದಿಂದ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.