ಇವತ್ತು ತನ್ನ ಸಿನಿಮಾ ರಿಲೀಸ್ ಸೆಲೆಬ್ರೆಷನ್ ಖುಷಿಯಲ್ಲಿರಬೇಕಿದ್ದ ಕಿಲಾಡಿ ಮನು ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಾಮಿಡಿ ಕಿಲಾಡಿಗಳು ಮಡೆನೂರು ಮನು ನಿನ್ನೆ ಅಂದರ್ ಆಗಿದ್ದು, ನಟನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಆರೋಪಿಯನ್ನು ಬಂಧಿಸಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಇಂದು ಕೋರ್ಟ್ಗೆ ಹಾಜರುಪಡಿಸಿದ್ದರು.
ಬೆಂಗಳೂರಿನ 6ನೇ ACJM ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪಿಯನ್ನು ಮೇ 27ರವರೆಗೂ ಪೊಲೀಸ್ ಕಸ್ಟಡಿಗೆ ಕರೆದುಕೊಂಡು ಹೋಗಲಾಗಿದೆ. ಇಂದಿನಿಂದ ಪೊಲೀಸರು FIRನಲ್ಲಿ ದಾಖಲಾದ ಆರೋಪಗಳ ಬಗ್ಗೆ ತೀವ್ರ ವಿಚಾರಣೆ ನಡೆಸಲಿದ್ದಾರೆ.
ವಿಚಾರಣೆ ಬಳಿಕ ಸಂತ್ರಸ್ತೆ ಹೇಳಿದ್ದೇನು?
ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ವಿಚಾರಣೆ ಬಳಿಕ ಮಾತನಾಡಿರುವ ಸಂತ್ರಸ್ತೆ, ಮನು ನನಗೆ ಸಾಕಷ್ಟು ಬ್ಲಾಕ್ ಮೇಲ್ ಮಾಡಿದ್ದಾನೆ. ಕುಡಿಸಿ ಸಾಕಷ್ಟು ಆಡಿಯೋ ವಿಡಿಯೋ ಮಾಡಿದ್ದಾನೆ. ಮೊನ್ನೆ ಶನಿವಾರ ನನಗೆ ಕುಡಿಸಿ, ಖಾಸಗಿ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾನೆ. ವಿಡಿಯೋ, ಆಡಿಯೋ ಮಾಡ್ಕೊಂಡು ಬೆದರಿಸಿದ್ದಾನೆ. ವೈರಲ್ ಆಗಿರುವ ಆಡಿಯೋ, ವಿಡಿಯೋಗಳನ್ನ ಬಲವಂತವಾಗಿ ಮನುನೇ ಮಾಡಿಸಿದ್ದು. ಶನಿವಾರ ಕ್ರೂರವಾಗಿ ನಡ್ಕೊಂಡಿದ್ದಕ್ಕೆ ನಾನು ಕಂಪ್ಲೆಂಟ್ ಕೊಟ್ಟಿದೀನಿ. ಸಿನಿಮಾ ವಿಚಾರಕ್ಕೂ ದೂರಿಗೂ ಸಂಬಂಧ ಇಲ್ಲ. ಸಿನಿಮಾ ಟೀಂನವರು ದೂರು ಕೊಡದಂತೆ ಮನವಿ ಮಾಡ್ಕೊಂಡ್ರು. ಆದ್ರೆ ಮನು ನನಗೆ ಕೊಟ್ಟಿರುವ ಹಿಂಸೆಯಿಂದ ನಾನು ದೂರು ಕೊಟ್ಟೆ ಎಂದು ಹೇಳಿದ್ದಾರೆ.