Close Menu
Ain Live News
    Facebook X (Twitter) Instagram YouTube
    Friday, May 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!

    By AIN AuthorMay 16, 2025
    Share
    Facebook Twitter LinkedIn Pinterest Email
    Demo

    ತುಮಕೂರು:- ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಸತ್ರ ನ್ಯಾಯಾಲಯದ ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ.

    ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ – ಶಾಸಕ ಕೆ.ಎಂ.ಉದಯ್

    ಅಪರಾಧಿ ಅರುಣ್ ಕುಮಾರ್​ಗೆ ಶಿಕ್ಷೆ ಜೊತೆಗೆ 1 ಲಕ್ಷ 50 ಸಾವಿರ ರೂ. ದಂಡ ವಿಧಿಸಿದೆ. ಹಾಗೇ, ಅಜ್ಜಿ ಗಂಗಮ್ಮ, ಹಾಗೂ ಮಲತಾಯಿ ರತ್ನಮ್ಮಗೂ ಕೂಡ ತಲಾ 1 ಲಕ್ಷ ರೂ. ದಂಡ ಸಹಿತ ಶಿಕ್ಷೆ ನೀಡಿದೆ. ಇನ್ನು ಅಪ್ರಾಪ್ತೆಗೆ ಕಾನೂನು ಸೇವಾ ಪ್ರಾಧಿಕಾರದ ಪರಿಹಾರ ಸೇರಿ 13 ಲಕ್ಷ 50 ಸಾವಿರ ರೂ. ಹಣ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

    ಘಟನೆ ವಿವರ:-

    ಮೊದಲ ಪತ್ನಿಗೆ ಐವರು ಹೆಣ್ಣು ಮಕ್ಕಳು ಅನ್ನೋ ಕಾರಣಕ್ಕೆ ಪತಿ ಮತ್ತೊಂದು ಮದುವೆಯಾಗಿದ್ದನು. ಆದರೆ, ಎರಡನೇ ಪತ್ನಿಗೆ ಮಕ್ಕಳಾಗಿರಲಿಲ್ಲ. ಈ ಹೊಟ್ಟೆ ಕಿಚ್ಚಿನಿಂದ ಮಲತಾಯಿ ರತ್ನಮ್ಮ ಹಾಗೂ ಅಜ್ಜಿ ಗಂಗಮ್ಮ ಸಂತ್ರಸ್ತೆಯನ್ನು ಕೂಲಿ ಕೆಲಸಕ್ಕೆ ಕರೆದೊಯ್ದಿದ್ದರು. ಬಳಿಕ, ಶೆಡ್​ನಲ್ಲಿ ಕೂಡಿ ಹಾಕಿ ಅಪರಾಧಿ ಅರುಣ್ ಕುಮಾರ್​​ನಿಂದ ಮೂರು ನಾಲ್ಕು ತಿಂಗಳು ಕಾಲ ನಿರಂತರವಾಗಿ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಲೈಂಗಿಕ ದೌರ್ಜನ್ಯದ ವೇಳೆ ಮಲತಾಯಿ ಹಾಗೂ ಅಜ್ಜಿ ಶೆಡ್ ಹೊರಗೆ ಕಾವಲು ಇರುತಿದ್ದರು.

    ಘಟನೆ ಸಂಬಂಧ ಸಂಸತ್ರಸ್ತೆ ಪಾವಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನ್ನ ಚಿಕ್ಕಮ್ಮ ಹಾಗೂ ಆಕೆಯ ತಾಯಿ ನಡೆಸಿದ ಕೃತ್ಯದ ಬಗ್ಗೆ ಅಪ್ರಾಪ್ತೆ ತನ್ನ ತಾಯಿ ಬಳಿ ಹೇಳಿಕೊಂಡಿದ್ದರು. ಘಟನೆ ಸಂಬಂಧ ಪೋಕ್ಸೋ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು.

    ದೋಷಾರೋಪ ಪಟ್ಟಿಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಇದೀಗ ಶಿಕ್ಷಿ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

    Post Views: 7

    Demo
    Share. Facebook Twitter LinkedIn Email WhatsApp

    Related Posts

    ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ – ಶಾಸಕ ಕೆ.ಎಂ.ಉದಯ್

    May 16, 2025

    ‘ಆಪರೇಷನ್ ಸಿಂದೂರ್ ಬೂಟಾಟಿಕೆ’ ಎಂದ ಕಾಂಗ್ರೆಸ್ ಶಾಸಕ! ಆಕ್ರೋಶ ಬೆನ್ನಲ್ಲೇ ಯುಟರ್ನ್

    May 16, 2025

    ಜನ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ: ಕೈ ನಾಯಕರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    May 16, 2025

    ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ: ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ – ಸಿಎಂ ಸಿದ್ದರಾಮಯ್ಯ

    May 16, 2025

    SSLC ಪರಿಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ

    May 16, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: ಸಾಧನಾ ಸಮಾವೇಶಕ್ಕೆ ಭರ್ಜರಿ ಸಿದ್ಧತೆ – ಡಿ.ಕೆ. ಶಿವಕುಮಾರ್ ಸ್ಥಳ ಪರಿಶೀಲನೆ.!

    May 16, 2025

    ರಾಹುಲ್‌ ಗಾಂಧಿ ಇರುವುದೇ ಜಾಮೀನಿನ‌ ಮೇಲೆ: ಅರವಿಂದ್ ಬೆಲ್ಲದ್

    May 16, 2025

    ಆಸ್ತಿ ಮಾಲೀಕರಿಗೆ ‘ಬಿ’ ಖಾತಾ ವಿತರಣೆ ಮಾಡಿದ ಪಂಚಾಯತ್ ಕಾರ್ಯಾಲಯ‌

    May 16, 2025

    ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನ ಭಾಷೆಯನ್ನು ಬಳಕೆ ಮಾಡುತ್ತೆ: ಪ್ರಹ್ಲಾದ್ ಜೋಶಿ

    May 16, 2025

    ಯುದ್ಧ ವಿಚಾರದಲ್ಲಿ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು: ಸಲೀಂ ಅಹ್ಮದ್

    May 16, 2025

    Puneeth Kerehalli: ಇದ್ರಿಷ್ ಪಾಷಾ ಸಾವಿನ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ: ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ

    May 16, 2025

    ನಾಲ್ಕು ಲಕ್ಷ ಬಂಡವಾಳ, 25 ಲಕ್ಷ ಲಾಭ.. ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿಯಾದ ಪದವೀಧರ ರೈತ..!

    May 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.