ಚಾಮರಾಜನಗರ:- ಕುರಿಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಕಾಲೊನಿಯಲ್ಲಿ ಜರುಗಿದೆ. ಹುಲಿಗೆ ಬಲಿಯಾದವರು ಪುಟ್ಟಮ್ಮ ಎಂದು ಗುರುತಿಸಲಾಗಿದೆ.
ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ : ಶುಕ್ರವಾರದ ರಾಶಿ ಭವಿಷ್ಯ 20 ಜೂನ್ 2025
ಮಹಿಳೆ ಕುರಿಗಳನ್ನು ಮೇಯಿಸುವಾಗ ಹುಲಿಯೊಂದು ಏಕಾಏಕಿ ಮೇಲೆರಗಿದ್ದು ಕುತ್ತಿಗೆ, ಎದೆಭಾಗ, ಹೊಟ್ಟೆ ಭಾಗದಲ್ಲಿ ಬಲವಾಗಿ ದಾಳಿ ನಡೆಸಿ ಕೊಂದಿದೆ. ನಂತರ, ಮಹಿಳೆಯನ್ನು ಅರಣ್ಯದೊಳಗೆ ಎಳೆದೊಯ್ದಿತ್ತು. ಗ್ರಾಮಸ್ಥರು ಹುಡುಕಾಡಿದಾಗ ಪುಟ್ಟಮ್ಮನ ಶವ ದೊರೆತಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಹುಲಿ ದಾಳಿ ನಡೆದಿದೆ.