ಚಾಮರಾಜನಗರ:- 5 ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಇದು ಪರಿಸರ ಪ್ರೇಮಿಗಳಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
4 ರಿಂದ 5 ವರ್ಷ ವಯಸ್ಸಿನ ಹೆಣ್ಣು ಹುಲಿ ಸಾವನ್ನಪ್ಪಿದ್ದು, ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಕಳೇಬರ ಪತ್ತೆಯಾಗಿದೆ. ಮೇಲ್ನೋಟಕ್ಕೆ ಸಹಜ ಸಾವಿನಂತೆ ಕಂಡುಬಂದಿದೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಇಲ್ಲಿನ ಮಲೆಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವಿನ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಅನ್ನೋದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಈ ಬೆನ್ನಲ್ಲೇ ಬಂಡೀಪುರ ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಮತ್ತೊಂದು ಸಾವನ್ನಪ್ಪಿರುವುದು ಪರಿಸರ ಪ್ರೇಮಿಗಳಲ್ಲಿ ಸಾಕಷ್ಟು ಆತಂಕ ಮೂಡಿಸಿದ.