ಬೆಂಗಳೂರು: ರಾಜ್ಯದ ಜನರಿಗೆ ಪ್ಲ್ಯಾನ್ ಅನುಮತಿ ಇಲ್ಲದೆ ಮನೆ ಕಟ್ಟಲು ಹೋಗಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಪ್ಲ್ಯಾನ್ ಅನುಮತಿ ಇಲ್ಲದೆ ಕರೆಂಟ್, ನೀರು ಕೊಡಬಾರದು ಎಂಬ ಸುಪ್ರೀಂ ಆದೇಶ ಇದೆ. ಇದರಿಂದ ರಾಜ್ಯದಲ್ಲಿ ಎರಡೂವರೆ ಲಕ್ಷ ಜನಕ್ಕೆ ಕರೆಂಟ್ ಇಲ್ಲದೆ ಸಂಪರ್ಕ ಪೆಂಡಿಂಗ್ ಇದೆ. ಶೀಘ್ರ ಪರಿಹಾರ ಮಾರ್ಗ ಪ್ರಕಟಿಸುವುದಾಗಿ ಹೇಳಿದರು.
ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ
ರಾಜ್ಯದ ಜನರಿಗೆ ಪ್ಲ್ಯಾನ್ ಅನುಮತಿ ಇಲ್ಲದೆ ಮನೆ ಕಟ್ಟಲು ಹೋಗಬಾರದು, ಮನವಿ ಮಾಡುತ್ತೇನೆ. ಎ ಖಾತೆ, ಬಿ ಖಾತೆ ಸಮಸ್ಯೆ ಎಲ್ಲ ಸರಿ ಮಾಡೋಣ. ಈಗಾಗಲೇ ಮೂರ್ನಾಲ್ಕು ಮೀಟಿಂಗ್ ಮಾಡಿದ್ದೀನಿ. ಮೂರ್ನಾಲ್ಕು ಆಪ್ಶನ್ ಇದೆ, ವರ್ಕೌಟ್ ಮಾಡುತ್ತಿದ್ದೇವೆ. ಕಾನೂನು ತಜ್ಞರ ಜೊತೆ ಸಭೆ ಬಳಿಕ ಸರ್ಕಾರ ನಿರ್ಧಾರ ಪ್ರಕಟ ಮಾಡಲಿದೆ ಎಂದರು.