ಬೆಂಗಳೂರು: ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವಂತಹ ಷಡ್ಯಂತ್ರ್ಯವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಜಾತಿಗಣತಿ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ನಮ್ಮೆಲ್ಲರನ್ನು ಒಡೆದು ಆಳುವ ನೀತಿ. ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವಂತಹ ಷಡ್ಯಂತ್ರ್ಯವನ್ನು ಸಿದ್ದರಾಮಯ್ಯ ಮಾಡಿದ್ದಾರೆ.
Chanakya Niti: ಚಾಣಕ್ಯನ ಪ್ರಕಾರ ಮಕ್ಕಳ ವಿಷಯದಲ್ಲಿ ಪೋಷಕರು ಈ ತಪ್ಪುಗಳನ್ನು ಮಾಡಬಾರದು…!
ಜಾತಿ ಜನಗಣತಿ ಮಾಡೋಕೆ ರಾಜ್ಯ ಸರ್ಕಾರಕ್ಕೆ ಅಧಿಕಾರನೇ ಇಲ್ಲ. ಅದನ್ನು ಕೇಂದ್ರ ಸರ್ಕಾರ ಮಾಡಬೇಕು. ಇದರ ಹೊರತಾಗಿಯೂ ಜಾತಿ ಸಮೀಕ್ಷೆ ಮಾಡಿ ಕೆಲ ಜಾತಿಗಳನ್ನು ಕಡಿಮೆ ತೋರಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಲಿಂಗಾಯತರು, ಒಕ್ಕಲಿಗರು ಸೇರಿ ಬೇರೆಬೇರೆ ಜಾತಿಯವರು ವಿರೋಧ ಮಾಡುತ್ತಿದ್ದಾರೆ. ನಾವು ಅತ್ಯಂತ ಉಗ್ರವಾಗಿ ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ತಕ್ಷಣವೇ ಈ ಜಾತಿ ವರದಿಯನ್ನು ಬರ್ಕಾಸ್ತ್ ಮಾಡಬೇಕು ಎಂದು ಆಗ್ರಹಿಸಿದರು.