ಬೆಂಗಳೂರು: ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ವಸೂಲಿಗೆ ಟಾಸ್ಕ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ.
ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!
ರಾಜ್ಯ ಸರ್ಕಾರದ ಪರಿಸ್ಥಿತಿ ನೋಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೆ ಹತಾಶರಾಗಿದ್ದಾರೆ. ಭ್ರಷ್ಟಾಚಾರಕ್ಕಾಗಿ ಸಚಿವರು ಕೌಂಟರ್ಗಳನ್ನು ತೆರೆದು ಕುಳಿತಿದ್ದಾರೆ. ಮುಖ್ಯಮಂತ್ರಿಗಳಿಗೆ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ, ಇಲ್ಲದಿದ್ದರೆ, ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
ಸ್ವತಃ ಈ ಕಮಿಷನ್ ಏಜೆಂಟರ್ನ್ನು ಸಿದ್ದರಾಮಯ್ಯ ಅವರೇ ನೇಮಿಸಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, ಮಾಜಿ ಸಿಎಂ ಡಿ.ದೇವರಾಜ ಅರಸು ದಾಖಲೆ ಮುರಿಯಬೇಕೆಂದು ಮುಖ್ಯಮಂತ್ರಿ ಕುರ್ಚಿಗೆ ಸಿದ್ದರಾಮಯ್ಯ ಅಂಟಿ ಕುಳಿತಿದ್ದಾರೆ. ಅವರು ಸರ್ಕಾರದ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.