ಬೆಂಗಳೂರು:- ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
RCB Vs PBKS ಫೈನಲ್ ಫೈಟ್: ಬೆಂಗಳೂರು ಗೆಲುವಿಗಾಗಿ ರಕ್ತದಾನ ಮಾಡಿದ ಕಿರುತೆರೆ ನಟಿ ರಜಿನಿ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸರ್ಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ – ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳದೆ ಪೊಲೀಸ್ ಮೂಲಕ ಗೂಂಡಾಗಿರಿ ಮಾಡಿದ್ದೇ ಆದರೆ, ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದರು.
ಈ ವಿಷಯವಾಗಿ ಸೋಮವಾರ ರಾತ್ರಿ ರಾಷ್ಟ್ರೀಯ ಮುಖಂಡರ ಜೊತೆ ಚರ್ಚೆ ಮಾಡಿದ್ದೇನೆ. ಇವತ್ತು ನಮ್ಮ ಸಂಸದರು, ಶಾಸಕರು ಪೊಲೀಸ್ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವರ ಗಡೀಪಾರು ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ ಮಹಾರಾಜರು ಹಿಂದೆ ನಮ್ಮ ದೇಶವನ್ನು ಆಳಿದ್ದರು. ಆಗ ಪಾಳೇಗಾರರು ಇದ್ದ ಬಗ್ಗೆ ನಾವು ಕೇಳಿದ್ದೇವೆ. ಆ ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುತ್ತಿದೆ. ಪ್ರಜಾಪ್ರಭುತ್ವವನ್ನು ಹಂಗಿಸುವಂತೆ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ