ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಹನಿ ಕಹಾನಿ ಜೋರು ಸದ್ದು ಮಾಡುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ, ಬಹಳ ದಿನಗಳ ನಂತರ ನಾಳೆ ದೆಹಲಿಗೆ ತೆರಳುತ್ತಿದ್ದಾರೆ.
ಇತ್ತೀಚೆಎ ಅನಾರೋಗ್ಯ ಕಾರಣದಿಂದ ನಡೆಯಲೂ ಆಗದೇ ವಿಶ್ರಾಂತಿ ತೆಗೆದುಕೊಂಡು ಇದೀಗ ವ್ಹೀಲ್ ಚೇರ್ ನಲ್ಲಿ ಓಡಾಡುತ್ತಿರುವ ಸಿಎಮ ಸಿದ್ದರಾಮಯ್ಯ, ಹೈಕಮಾಂಡ್ ಭೇಟಿಗೆ ಮುಹೂರ್ತ ಫಿಕ್ಸ್ ಆಗಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಮುಡಾ ಹಗರಣ ಬಹಳವಾಗಿ ಕಾಡಿತ್ತು. ಅದಾದ ಬಳಿಕ ಬಜೆಟ್ ಮಂಡನೆ, ಅಧಿವೇಶನ ಸೇರಿ ಹಲವು ಕಾರಣಗಳಿಂದ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿರಲಿಲ್ಲ. ಕಳೆದ ವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು. ವಿಶ್ರಾಂತಿ ಪಡೆದ ಬಳಿಕ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದರು.
ಸದ್ಯ ಬೆನ್ನು ನೋವಿನಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಬಹಳ ದೂರ ನಡೆಯಲು ಆಗದಿದ್ದರೂ ವ್ಹೀಲ್ ಚೇರ್ ನಲ್ಲೇ ಓಡಾಡುತ್ತಿದ್ದಾರೆ. ಒಂದು ಕಡೆ ಅಧಿವೇಶನ, ರಾಜ್ಯ ಬಜೆಟ್ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಸಚಿವ ಕೆ.ಎನ್ ರಾಜಣ್ಣ ವಿರುದ್ಧ ನಡೆದ ಹನಿಟ್ರ್ಯಾಪ್ ಯತ್ನ ರಾಜ್ಯರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದೆ.
ವಿರೋಧ ಪಕ್ಷಗಳು ಸರ್ಕಾರದಲ್ಲಿರುವ ಪ್ರಭಾವಿ ನಾಯಕರ ಮೇಲೆ ಬೊಟ್ಟು ಮಾಡುತ್ತಿದ್ದರೆ, ರಾಜ್ಯ ಕಾಂಗ್ರೆಸ್ ಪಾಳೆಯದಲ್ಲೂ ಸಂಚಲನ ಸೃಷ್ಟಿ ಮಾಡಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳುತ್ತಿದ್ದಾರೆ.
ಸದ್ಯ ಮುಡಾ ಸಂಕಷ್ಟದಿಂದ ಪಾರಾಗಿರುವ ಸಿಎಂ ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ಹನಿ ಹನಿ ಅಸ್ತ್ರವೊಂದು ಸಿಕ್ಕಂತಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ದೆಹಲಿಗೆ ಬನ್ನಿ ಎಂದು ಹೋಗಿದ್ದಾರೆ. ಹೀಗಾಗಿ ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದು ಏನೆಲ್ಲಾ ವಿಚಾರಗಳನ್ನು ಹೈಕಮಾಂಡ್ ಗೆ ಮುಂದೆ ಚರ್ಚೆ ನಡೆಸುತ್ತಾರೆ ಅನ್ನೋದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಜತೆಗೆ, ಹಲವು ತಿಂಗಳಿಂದ ಖಾಲಿ ಇರುವ ಮೇಲ್ಮನೆಯ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆಯೂ ಚರ್ಚೆಯಾಗುವ ನಿರೀಕ್ಷೆಯಿದೆ.