ಚೆನ್ನೈ : ತಮಿಳುನಾಡು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಡಿಎಂಕೆ ಸರ್ಕಾಋದ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹೌದು,ತಮಿಳುನಾಡಿನಲ್ಲಿ ಪ್ರಮುಖ ಸಚಿವರಾದ ವಿ.ಸೆಂಥಿಲ್ ಬಾಲಾಜಿ ಮತ್ತು ಕೆ.ಪೊನ್ಮುಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶಿಫಾರಸಿನ ಮೇರೆಗೆ ರಾಜ್ಯಪಾಲ ಆರ್.ಎನ್. ರವಿ ಭಾಸಚಿವರಾದ ವಿ. ಸೆಂಥಿಲ್ಬಾಲಾಜಿ ಮತ್ತು ಕೆ. ಪೊನ್ಮುಡಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎನ್ನಲಾಗಿದೆ.
ಸೆಂಥಿಲ್ ಬಾಲಾಜಿ ವಿರುದ್ಧ ಅಕ್ರಮ ಹಣವರ್ಗಾವಣೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಈ ಹಿಂದೆ ಇಡಿ ಅವರನ್ನು ಬಂಧಿಸಿತ್ತು. ಅಂತೆಯೇ ಇಂದು ರಾಜಿನಾಮೆ ನೀಡಿರುವ ಕೆ ಪೊನ್ಮುಡಿ ಕೂಡ ಹಿಂದೂ ಧರ್ಮದ ಕುರಿತು ಮತ್ತು ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ವಿಪಕ್ಷಗಳು ಮಾತ್ರವಲ್ಲದೇ ಸ್ವಪಕ್ಷೀಯರಿಂದಲೂ ಟೀಕೆ ಎದುರಿಸಿದ್ದರು.