ಕಲಬುರಗಿ : ತಂದೆಯನ್ನೇ ಕೊಂದು ಅಪಘಾತವೆಂದು ಬಿಂಬಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 43 ವರ್ಷದ ರಾಜು ಗಾಯಕವಾಡ ಕೊಲೆಯಾಗಿರುವ ವ್ಯಕ್ತಿ. ಕಲಬುರಗಿ ಹೊರ ವಲಯ ಶಾಹಬಾದ್ ರಸ್ತೆಯಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ರಾಜು ಗಾಯಕವಾಡ ಕೂಲಿ ಕೆಲಸ ಮಾಡುತ್ತಿದ್ದರು.
ವಿಜಯಪುರ ಜಿಲ್ಲೆಯ ಇಂಡಿ ಮೂಲದ ರಾಜು ಗಾಯಕವಾಡ ಕುಟುಂಬ ಕಳೆದ 20 ವರ್ಷಗಳಿಂದ ಕಲಬುರಗಿಯಲ್ಲಿ ವಾಸವಿದ್ದು, ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿತ್ತು.
ರಂಜಾನ್ ವೇಳೆ ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ: ಸಂಘ ಪರಿವಾರದ ವಿರುದ್ಧ ವಿವಾದಿತ ಪೋಸ್ಟರ್ ಪ್ರದರ್ಶನ!
ಇತ್ತೀಚಿನ ದಿನಗಳಲ್ಲಿ ರಾಜು ಕುಡಿತ ಜಾಸ್ತಿ ಆಗಿತ್ತು ಕಳೆದ 4-5 ವರ್ಷಗಳಿಂದ ಕೆಲಸ ಮಾಡುವುದು ಕಡಿಮೆ ಮಾಡಿದ್ದರು. ಹೆಂಡತಿ ಮತ್ತು ಮಕ್ಕಳಿಗೆ ಹಣ ಕೊಡುವಂತೆ ಗಲಾಟೆ ಮಾಡುತ್ತಿದ್ದರು. ತಂದೆ ಕಾಟಕ್ಕೆ ಬೇಸತ್ತು ಅಪ್ರಾಪ್ತ ಮಗ ಮತ್ತು ಅಳಿಯ ಸಚಿನ್ ಇಬ್ಬರು ಸೇರಿಕೊಂಡು ಮಾ. 17 ರಂದು ರಾಜು ಗಾಯಕವಾಡ ಅವರ ಹಲ್ಲೆ ಮಾಡಿದ್ದಾರೆ. ಮರ್ಮಾಂಗಕ್ಕೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಸಾಕ್ಷಿ ನಾಶಪಡಿಸಲು ಅಪ್ರಾಪ್ತ ಮಗ ಮತ್ತು ಅಳಿಯ ಸಚಿನ್ ಇಬ್ಬರು ರಾಜು ಅವರ ಮೃತದೇಹವನ್ನು ಬೈಕ್ ಮೇಲೆ ತೆಗೆದುಕೊಂಡು ಶಾಹಬಾದ್ ಮುಖ್ಯರಸ್ತೆಯಲ್ಲಿ ಎಸೆದು, ತಲೆ ಮೇಲೆ ಕಲ್ಲು ಹಾಕಿದ್ದಾರೆ. ಅಪಘಾತ ಎನ್ನೋರೀತಿ ಬಿಂಬಿಸಿದ್ದಾರೆ.