Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಾಲಕಾರ್ಮಿಕರ ತಪಾಸಣಾ ಕಾರ್ಯಾಚರಣೆ ಚುರುಕುಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

    By AIN AuthorJune 2, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ:  ಬಾಲಕಾರ್ಮಿಕ ಪದ್ದತಿಯಿಂದ ಮಕ್ಕಳನ್ನು ರಕ್ಷಿಸಲು ಜಿಲ್ಲಾದ್ಯಂತ ವ್ಯಾಪಕವಾಗಿ ಕಾರ್ಯಾಚರಣೆ ಹಾಗೂ ತಪಾಸಣಾ ಕಾರ್ಯವನ್ನು ಮತ್ತಷ್ಟು ಹೆಚ್ಚಳ ಮಾಡುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು.

    ಹೇಮಾವತಿ ಪ್ರತಿಭಟನೆ ಹಿಂದೆ ಬ್ಲಾಕ್ ಮೇಲ್: ಶೀಘ್ರವೇ ಇವರ ಡಿಮಾಂಡ್ ಬಹಿರಂಗಪಡಿಸುವೆ – ಡಿಕೆ ಶಿವಕುಮಾರ್!

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಬಾಲಕಾರ್ಮಿಕರ ರಕ್ಷಣೆ, ಪುನರ್ವಸತಿ, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ನಿಷೇಧ, ನಿಯಂತ್ರಣ ಕಾಯ್ದೆ ಕುರಿತ ಜಿಲ್ಲಾಮಟ್ಟದ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚುರುಕುಗೊಳಿಸಬೇಕು. ಬಾಲಕಾರ್ಮಿಕರು ಕಂಡುಬಂದಲ್ಲಿ ಸಂಬಂಧಪಟ್ಟ ಅಂಗಡಿ, ಉದ್ದಿಮೆ ಸಂಸ್ಥೆಗಳ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮವಹಿಸುವ ಜೊತೆಗೆ ಅಂಗಡಿ ಉದ್ಯಮ ಪರವಾನಗಿ ರದ್ದು ಮಾಡುವ ಕಠಿಣ ಕ್ರಮಗಳಿಗೂ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

    2024ನೇ ಏಪ್ರಿಲ್ ನಿಂದ 2025ರ ಮಾರ್ಚ್‍ವರೆಗೆ ತಪಾಸಣೆ ಕೈಗೊಂಡ ವೇಳೆ 25 ಬಾಲಕಾರ್ಮಿಕರನ್ನು ಗುರುತಿಸಲಾಗಿದೆ. ಆದರೆ 7 ಪ್ರಕರಣಗಳಲ್ಲಿ ಮಾತ್ರ ಎಫ್.ಐ.ಆರ್ ದಾಖಲಾಗಿದೆ. ಉಳಿದ ಪ್ರಕರಣಗಳಲ್ಲಿಯೂ ಎಫ್.ಐ.ಆರ್ ದಾಖಲಿಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶೀಘ್ರವೇ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಆದೇಶ ನೀಡಿದರು.

    ಬಾಲಕಾರ್ಮಿಕ ಪದ್ದತಿಯಿಂದ ರಕ್ಷಿಸಿದ ಮಕ್ಕಳನ್ನು ಅವರ ಪೋಷಕರಿಗೆ ಒಪ್ಪಿಸುವುದಷ್ಟೇ ಕಾರ್ಮಿಕ ಇಲಾಖೆಯ ಕೆಲಸವಲ್ಲ. ರಕ್ಷಿಸಲ್ಪಟ್ಟ ಮಕ್ಕಳ ಮುಂದಿನ ಭವಿಷ್ಯ ಉತ್ತಮವಾಗಿ ರೂಪಿಸುವ ಜವಾಬ್ದಾರಿ ಕಾರ್ಮಿಕ ಇಲಾಖೆಯೊಂದಿಗೆ ಇತರೆ ಇಲಾಖೆಗಳಿಗೂ ಇದೆ. ಶಿಕ್ಷಣ, ಕೌಶಲ್ಯ ತರಬೇತಿಯಂತಹ ಕಾರ್ಯಕ್ರಮಗಳನ್ನು ಮಕ್ಕಳಿಗೆ ಮುಂದುವರೆಸಬೇಕು. ವಸತಿ ಶಾಲೆ, ಹಾಸ್ಟೆಲ್ ಗಳಂತಹ ಸೌಲಭ್ಯವನ್ನು ಕಲ್ಪಿಸಬೇಕು. ವೃತ್ತಿ ಶಿಕ್ಷಣ, ನರ್ಸಿಂಗ್ ಸೇರಿದಂತೆ ಮಕ್ಕಳಿಗೆ ಇರುವ ಆಸಕ್ತಿ ವಿಷಯದಲ್ಲಿ ಶಿಕ್ಷಣ ಕೊಡಿಸಿ ಅವರ ಭವಿಷ್ಯಕ್ಕೆ ನೆರವಾಗಬೇಕು ಎಂದರು.

    ಮಕ್ಕಳನ್ನು ಏಕೆ ದುಡಿಮೆಗೆ ದೂಡಲಾಗಿದೆ ಎಂಬ ಬಗ್ಗೆ ಕುಟುಂಬದಿಂದ ಕೌನ್ಸಲಿಂಗ್ ಮೂಲಕ ತಿಳಿದುಕೊಳ್ಳಬೇಕು. ಉದ್ಯೋಗ, ಆರ್ಥಿಕ ಸೌಲಭ್ಯಗಳು ಅಗತ್ಯವಿದ್ದಲ್ಲಿ ಕಲ್ಪಿಸುವ ಕಾರ್ಯವನ್ನು ಮಾಡಬೇಕಾಗುತ್ತದೆ. ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ನೆರವಾಗುವ ನಿಟ್ಟಿನಲ್ಲಿ ಚಾಮರಾಜನಗರ ಜಿಲ್ಲೆ ಮಾದರಿಯಾಗಬೇಕು. ಈ ಬಗ್ಗೆ ಪೂರ್ವ ಯೋಜನೆ ಹಾಗೂ ರೂಪುರೇಷೆಗಳನ್ನು ಸಿದ್ದಪಡಿಸಿಕೊಂಡು ಅನುಷ್ಠಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

    ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ ಅವರು ಮಾತನಾಡಿ ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ರಕ್ಷಿಸಿದ ಬಳಿಕ ಮುಂದೆ ವಹಿಸಬೇಕಿರುವ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ. ಸವಿತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಬಚಪನ್ ಬಚಾವೋ ಆಂದೋಲದ ರಾಜ್ಯ ಸಂಯೋಜಕರಾದ ಬಿನು ವರ್ಗಿಸ್, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಎಂ. ಮಹೇಶ್, ತಾಲೂಕು ಕಾರ್ಮಿಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಬಾಲಾಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನ್ಯೂರೋ ನೇವಿಗೇಶನ್ ಸಿಸ್ಟಂ ಅಳವಡಿಕೆ

    June 4, 2025

    ಕಳಸಾ – ಬಂಡೂರಿ ಹಾಗೂ ಮಲಪ್ರಭಾ ನದಿ ಜೋಡಣೆ ಹೋರಾಟ ಸಮಿತಿ ತೀವ್ರ ಖಂಡನೆ

    June 4, 2025

    ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವು..!

    June 4, 2025

    ಬಸ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

    June 4, 2025

    RCB ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು..!

    June 4, 2025

    ಆರ್‌ಸಿಬಿಗೆ ರೋಚಕ ಜಯ: ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ!

    June 4, 2025

    ಚೊಚ್ಚಲ ಕಪ್ ಗೆದ್ದ ಆರ್ ಸಿಬಿ: ಮುಗಿಲು ಮುಟ್ಟಿದ ಗೆಲುವಿನ ಸಂಭ್ರಮ.. ಹುಚ್ಚೆದ್ದು ಕುಣಿದ ಫ್ಯಾನ್ಸ್!

    June 4, 2025

    ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅರೆಸ್ಟ್!

    June 3, 2025

    RCB Vs PBKS: ಪಟಾಕಿ ಸಿಡಿಸಿ ಆರ್.ಸಿ.ಬಿ ಅಭಿಮಾನಿಗಳ ಸಂಭ್ರಮ!

    June 3, 2025

    ಹುಬ್ಬಳ್ಳಿಯಲ್ಲಿ L&T ಅಧಿಕಾರಿಗಳ ಎಡವಟ್ಟು; ಒಬ್ಬ ಸಾವು ಇನ್ನೊಬ್ಬನ ಸ್ಥೀತಿ ಗಂಭೀರ!

    June 3, 2025

    ನಿರ್ಮಾಣ ಹಂತದಲ್ಲಿದ್ದ ಹೆಬ್ಬಾಗಿಲು ಕುಸಿದು ಓರ್ವ ಸಾವು..! ಮೂವರಿಗೆ ಗಾಯ

    June 3, 2025

    ಅನೈತಿಕ ಸಂಬಂಧ: ಹೆಂಡತಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಪತಿ!

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.