Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ, ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ: ಸಿಎಂ ಸೂಚನೆ

    By Author AINJune 28, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

    ಮಧುಮೇಹಿಗಳೇ ಗಮನಿಸಿ.. ಸಕ್ಕರೆ ಕಾಯಿಲೆಗೆ ಕೆಂಪು ದಂಟಿನ ಸೊಪ್ಪು ವರದಾನ..! ಸಿಕ್ಕರೆ ಬಿಡದೆ ತಿನ್ನಿ

    ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು. ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

    • ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ.

    • ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.
    • ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

    • ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.
    • ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.

    • ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.

    • ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.

    • ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ.

    • ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.

    • ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.

    • ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.

    • ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.

    • ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.

    • ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.

    • ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.

    • ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

    • ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.

    • ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.

    • ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.

    • ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

    • ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು. – ಡಾ. ಹೆಚ್.ಸಿ.ಮಹದೇವಪ್ಪ

    • ಮೈಸೂರು ದಸರಾ ಪ್ರಾಧಿಕಾರ ಸ್ಥಾಪಿಸಿ ಅದರ ಮೂಲಕ ದಸರಾ ವ್ಯವಸ್ಥಿತವಾಗಿ ಆಚರಿಸಬೇಕು. ಕುಳಿತುಕೊಳ್ಳುವ ಸ್ಥಳಾವಕಾಶ ಹೆಚ್ಚಿಸಬೇಕು. ಪಾರ್ಕಿಂಗ್‌ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಬೇಕು-ತನ್ವೀರ್‌ ಸೇಠ್

    • ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ನದಿಗಳು ತುಂಬಿದ್ದು, ಕೆಆರ್‌ಎಸ್‌ ಈ ಬಾರಿ ಬೇಗನೇ ತುಂಬಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಕಲಾ ತಂಡಗಳನ್ನು ಹೊರತುಪಡಿಸಿ ಬೇರೆ ಯಾರೂ ಓಡಾಡಲು ಅವಕಾಶ ಮಾಡಬಾರದು. ಕಲಾ ತಂಡಗಳಲ್ಲಿ ವೈವಿಧ್ಯತೆ ಇರಬೇಕು- ಜಿ.ಟಿ.ದೇವೇಗೌಡ

    • ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಕೋ ಫ್ರೆಂಡ್ಲಿ ಹಸಿರು ದಸರಾ ಆಚರಿಸಲು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು- ಪುಷ್ಪಾ ಅಮರನಾಥ

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್‌ ಭೈರತಿ, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್‌, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ.!

    June 28, 2025

    ಮಾಜಿ ಮೇಯರ್ ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ರೌಡಿಶೀಟರ್ ರಿಲೀಸ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    June 28, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

    June 28, 2025

    ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!

    June 28, 2025

    ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!

    June 28, 2025

    ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆಯಿಂದ ಎರಡು ದಿನ ವಿದ್ಯುತ್ ಕಡಿತ: ಪವರ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ!

    June 28, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಸಿಎಂ ಬದಲಾವಣೆಯ ಅಗತ್ಯವಿಲ್ಲ, ಸಿದ್ದರಾಮಯ್ಯಗೆ ಇರುವಷ್ಟು ಬೆಂಬಲ ಯಾರಿಗೂ ಇಲ್ಲ: ರಾಯರೆಡ್ಡಿ

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.