Close Menu
Ain Live News
    Facebook X (Twitter) Instagram YouTube
    Sunday, May 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಮಲ ಬಿಟ್ಟು ” ಕೈ” ಹಿಡಿಯಲಿದ್ದಾರೆ ಎಸ್ ಟಿ ಸೋಮಶೇಖರ್ – ಪಕ್ಷ ಸೇರ್ಪಡೆ ಯಾವಾಗ!?, ಕ್ಷೇತ್ರ ಯಾವುದು!?

    By AIN AuthorNovember 17, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಮೈತ್ರಿ ಸರ್ಕಾರದ ವೇಳೆ ಬಿಜೆಪಿ ಸೇರಿದ್ದ ಹಲವು ನಾಯಕರು ಇದೀಗ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಬರಲಿದ್ದಾರೆ ಎನ್ನುವ ಚರ್ಚೆಗಳು ಶುರವಾಗಿದೆ.

    ಮಾಜಿ ಸಚಿವ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ ಇದೀಗ ಮತ್ತೆ ಮುನ್ನಲೆಗೆ ಬಂದಿದೆ.

    ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವನ್ನ ಎಸ್‌ ಟಿ ಸೋಮಶೇಖರ್‌ ಹಾಡಿಹೊಗಳಿದ್ರು.

    2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. . ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಅಭಿಮಾನಿ ನಾನು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ರು.

    ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಅವರನ್ನ ಕೆಲ ತಿಂಗಳ ಹಿಂದೆಯಷ್ಟೇ ಎಸ್‌ ಟಿ ಸೋಮಶೇಖರ್‌ ಭೇಟಿಯಾಗಿ ಪಕ್ಷ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಯಲ್ಲೂ ಕನಿಷ್ಠ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನ ಹಾಲಿ ಹಾಗೂ ಮಾಜಿ ಶಾಸಕರಿಗೆ ಕಾಂಗ್ರೆಸ್‌ ನಾಯಕರು ಗಾಳ ಹಾಕಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಕನಿಷ್ಠ ಎರಡು ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ಕಾಂಗ್ರೆಸ್‌ ಗಾಳ ಹಾಕಿದೆ.

    ಈಗಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ ವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಈ ಕ್ಷೇತ್ರವನ್ನ ಗೆಲ್ಲಲ್ಲು ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸಿದ್ದು, ಯಶವಂತಪುರ ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, ಹೆಚ್ಚು ವರ್ಚಸ್ಸನ್ನ ಹೊಂದಿರುವ ಎಸ್‌ ಟಿ ಸೋಮಶೇಖರ್‌ ಅವರನ್ನ ಕಾಂಗ್ರೆಸ್‌ ಕರೆತರುವ ಪ್ರಯತ್ನ ನಡೆದಿದ್ದು, ಎರಡು ಆಫರ್‌ ಗಳನ್ನ ಮುಂದಿಟ್ಟು ಕಾಂಗ್ರೆಸ್‌ ಗೆ ಕರೆತರುವ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.

    ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಶಾಸಕರಾಗಿರುವ ಎಸ್‌ ಟಿ ಸೋಮಶೇಖರ್‌ ಅವರನ್ನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್‌ ನಾಯಕರು ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಯಶವಂತಪುರ ವಿಧಾನಸಭೆ ಕ್ಷೇತ್ರ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಹೀಗಾಗಿ ಬೆಂಗಳೂರು ಉತ್ತರ ಕ್ಷೇತ್ರವನ್ನ ಸುಲಭವಾಗಿ ಗೆಲ್ಲಬಹುದು ಎಂಬ ಹಲವು ತಂತ್ರಗಾರಿಕೆಯನ್ನ ಕಾಂಗ್ರೆಸ್‌ ನಾಯಕರು ನಡೆಸಿದ್ದಾರೆ.

    ಇನ್ನೂ ಕಾಂಗ್ರೆಸ್‌ ನಾಯಕರು ಕೇವಲ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಎಸ್‌ ಟಿ ಸೋಮಶೇಖರ್‌ ಅವರನ್ನ ಮತ್ತೆ ಪಕ್ಷಕ್ಕೆ ಕರೆದುಕೊಳ್ಳುತ್ತಿಲ್ಲ, ಬಿಬಿಎಂಪಿ ಚುನಾವಣೆಯ ದೃಷ್ಟಿಯಿಂದಲೂ ಮೂಲ ಕಾಂಗ್ರೆಸ್ಸಿಗರನ್ನ ಸೆಳೆಯಲು ಕೈ ನಾಯಕರು ಮುಂದಾಗಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ʼ45ʼ ಸಿನಿಮಾದ ʼಶಿವಂ ಶಿವಂ ಸನಾತನಂʼ ಹಾಡು ಬಿಡುಗಡೆ..ಶಿವ ಹೆಸರಿನ ನಂಟು ಬಿಚ್ಚಿಟ್ಟ ಶಿವಣ್ಣ!

    May 24, 2025

    ರಾಜ್ಯದಲ್ಲಿ ಕೊರೊನಾ ರೀ ಎಂಟ್ರಿ: ಮತ್ತೆ ಕೋವಿಡ್ ಟೆಸ್ಟ್ ಶುರುವಾಗುತ್ತಾ.? ದಿನೇಶ್ ಗುಂಡೂರಾವ್ ಹೇಳಿದ್ದೇನು?

    May 24, 2025

    ಹುಟ್ಟುಹಬ್ಬ ದಿನವೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ದಿನಸಿ ವಿತರಿಸಿದ ರಾಗಿಣಿ! Video ವೈರಲ್!

    May 24, 2025

    ಮಳೆಹಾನಿ ಸಭೆಗೆ ಕರೆಯದೇ ನಿರ್ಲಕ್ಷ್ಯ: ಡಿಸಿಎಂ ಡಿಕೆಶಿಗೆ ಟಿ.ಎ ಶರವಣ ಶಿಷ್ಟಾಚಾರ ಪಾಠ

    May 24, 2025

    ಸಿ.ಟಿ ರವಿ ಕೋಟೆಗೆ ಲಕ್ಷ್ಮಿ ಹೆಬ್ಬಾಳಕರ್‌ ಲಗ್ಗೆ: ಭರ್ಜರಿ ರೋಡ್‌ ಶೋ..ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಪ್ಲಾನ್‌ ಠುಸ್‌

    May 24, 2025

    KCET Result 2025: ಸಿಇಟಿ ಫಲಿತಾಂಶ ಪ್ರಕಟ: ಮೊದಲ Rank ಪಡೆದವರ ಪಟ್ಟಿ ಇಲ್ಲಿದೆ ನೋಡಿ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ವಿವಾದದಲ್ಲಿ ಡವ್‌ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ

    May 24, 2025

    ರಾಜ್ಯದಲ್ಲೂ ಹೆಚ್ಚುತ್ತಿದೆ ಕೊರೊನಾ ಕಾಟ: ಮಾಸ್ಕ್‌ ಧರಿಸಿ ಸಿಎಂ ಸಿದ್ದರಾಮಯ್ಯ ಜಾಗೃತಿ

    May 24, 2025

    ʼಮೈಸೂರು ಪಾಕ್‌ʼ ಅಲ್ಲ ʼಮೈಸೂರು ಶ್ರೀʼ…ಈ ಸಿಹಿತಿಂಡಿ ಹೆಸರು ಬದಲಾವಣೆಗೆ ಕಾರಣವೇನು?

    May 24, 2025

    ಸಿಲಿಕಾನ್ ಸಿಟಿಯಲ್ಲಿ 3 ಮಕ್ಕಳಿಗೆ Corona ಪಾಸಿಟಿವ್: ನಾಳೆಯಿಂದ Covid ಟೆಸ್ಟ್ ಆರಂಭ..!

    May 24, 2025

    Karnataka Covid Guidelines: ಮತ್ತೆ ಬಂತು ಕೊರೊನಾ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಇಲ್ಲಿದೆ ಸಂಪೂರ್ಣ ಮಾಹಿತಿ

    May 24, 2025

    ಅಪ್ಪಿತಪ್ಪಿಯೂ ಇವುಗಳನ್ನು ಕುಕ್ಕರ್’ನಲ್ಲಿ ಬೇಯಿಸಬೇಡಿ..! ಇದು ಅನಾರೋಗ್ಯವನ್ನು ಖರೀದಿಸಿದಂತೆ..

    May 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.