ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೊ ಕೇಸ್ ಸಂಬಂಧ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದ ಹೈ ಕೋರ್ಟ್ ಇಂದು ವಿಚಾರಣೆ ನಡೆಯಲಿದೆ.
ವಿಚಾರಣೆ ನಡೆಸಿ ಇಂದು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಇಂದು ಎಜಿ ಶಶಿಕಿರಣ್ ಶೆಟ್ಟಿ. ವರದಿ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ತನಿಖೆಯ ಪ್ರಗತಿ ಬಗ್ಗೆ ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗುತ್ತದೆ. ಕಾಲ್ತುಳಿತ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಸಂಬಂಧ ಏನು ಕ್ರಮ ಕೈಗೊಳ್ಳಲಾಗಿದೆ, ಕಾರ್ಯಕ್ರಮ ಆಯೋಜನೆ ವೇಳೆ ಏನೆಲ್ಲಾ ಮುಂಜಾಗ್ರತೆ ವಹಿಸಿತ್ತು..? ಘಟನೆ ನಂತರ ಏನೆಲ್ಲಾ ಕ್ರಮ ಆಗಿದೆ ಎಂದು ಹೈ ಕೋರ್ಟ್ ಕೇಳಿತ್ತು. ಅದರಂತೆ ಇಂದು ಹೈ ಕೋರ್ಟ್ ಗೆ ಸರ್ಕಾರದ ಪರ ವಕೀಲರು ವರದಿ ಸಲ್ಲಿಸಲಿದ್ದಾರೆ.