Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    By Author AINJune 7, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಹದಿನೆಂಟು ವರ್ಷಗಳ ನಂತರ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ನಡೆಯಬೇಕಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಮೊನ್ನೆ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಭಾರತದ ಕ್ರೀಡಾ ಇತಿಹಾಸದಲ್ಲಿ ಒಂದು ಕಪ್ಪುಚುಕ್ಕೆಯಾಗಿ ಉಳಿಯಲಿದೆ.

    ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!

    ಇದೀಗ ಈ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬೆಂಗಳೂರು ಕೊಟ್ಟಿಗೆಪಾಳ್ಯದ ನಿವಾಸಿ ಗಿರೀಶ್‌ ಕುಮಾರ್‌ ಎಂಬುವವರು ಸುದೀರ್ಘ ಪತ್ರದೊಂದಿಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

    ದೂರಿನಲ್ಲಿ ಏನಿದೆ?
    ಐಪಿಎಲ್‌-ಆರ್‌ಸಿಬಿ ವಿಜಯೋತ್ಸವಕ್ಕೆ ಸಾರ್ವಜನಿಕರನ್ನು ಸ್ವತಃ ಮುಖ್ಯಮಂತ್ರಿಗಳೇ ಆಹ್ವಾನಿಸಿದ್ದಾರೆ. ಸರಿಯಾದ ವ್ಯವಸ್ಥೆ ಮಾಡದೇ, ನಿರ್ಲಕ್ಷ್ಯ ವಹಿಸಿದ ಕಾರಣ ಅಮಾಯಕರ ಸಾವು–ನೋವಾಗಿದೆ. ಈ ಹಿನ್ನೆಲೆ ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದಾರೆ.

    18 ವರ್ಷಗಳ ಬಳಿಕ ಆರ್‌ಸಿಬಿ ಕೆಕೆಟ್‌ ತಂಡ ಐಪಿಎಲ್‌ನಲ್ಲಿ ಟ್ರೋಫಿ ಗೆದ್ದಿದೆ. ಐಪಿಎಲ್‌ ಮೂಲ ಸಿದ್ಧಾಂತವೇ ವ್ಯಾಪಾರ, ಆದಾಯ ಗಳಿಸುವಿಕೆ, ಇದು ರಾಜ್ಯ, ರಾಷ್ಟ್ರಮಟ್ಟದಲ್ಲಿ ದೇಶ ಪ್ರೇಮ ಜಾಗೃತಗೊಳಿಸುವ ಕೆಲಸವನ್ನೇನು ಮಾಡುವುದಿಲ್ಲ. ಐಪಿಎಲ್‌ನಿಂದ ಜೂಜಾಡಿಕೊಂಡು ಮನೆ – ಮಠ ಕಳೆದುಕೊಂಡಿರುವ ಪ್ರಕರಣಗಳಿವೆ. ಮ್ಯಾಚ್‌ ಫಿಕ್ಸಿಂಗ್‌ನಲ್ಲೂ ಭಾಗಿಯಾದ ಪ್ರಕರಣಗಗಳಿವೆ.

    ಖಾಸಗಿಯವರು ಆಟಗಾರರನ್ನ ಕೊಂಡುಕೊಂಡು ತಂಡಗಳನ್ನು ಮಾಡಿಕೊಂಡು ಆಟ ಆಡಿಸುತ್ತಾ ಅದರಲ್ಲಿ ಲಾಭದ ಉದ್ದೇಶವನ್ನೇ ಹೊಂದಿದ್ದಾರೆ. ಆಟಗಾರರಲ್ಲೂ ಸಹ ಉನ್ನತ ಸಿದ್ಧಾಂತ ಇರೋದಿಲ್ಲ. ಹೆಚ್ಚು ಹಣ ಕೊಟ್ಟವರ ತಂಡಕ್ಕಾಗಿ ಆಡುತ್ತಾರೆ. ಈ ರೀತಿ ಗೆದ್ದವರಿಗೆ ಸರ್ಕಾರದ ಮಟ್ಟದಲ್ಲಿ ವೈಭದಿಂದ ಗೌರವಿಸಬಹುದೇ? ಇವರನ್ನ ಸ್ವತಃ ಡಿಸಿಎಂ ಹೋಗಿ ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದ್ದಾರೆ.

    ಹಾಗೇ ನೋಡಿದ್ರೆ ರಾಷ್ಟ್ರ, ರಾಜ್ಯಕ್ಕಾಗಿ ಆಡಿ ಪದಕ ಪಡೆದ ಅನೇಕ ಜನ ಆಟಗಾರರಿದ್ದಾರೆ. ಈ ಮಟ್ಟದಲ್ಲಿ ಸರ್ಕಾರಗಳಲ್ಲಿ ಆದ್ಯತೆ ಕೊಟ್ಟಿರುವುದಿಲ್ಲ. ಯುದ್ಧದಲ್ಲಿ ಹೋರಾಡಿ ವೀರ ಮರಣ ಹೊಂದಿದ ಯೋಧರ ಮನೆಗೂ ಭೇಟಿ ಕೋಡಲು ಆಸಕ್ತಿ ತೋರಲ್ಲ. ಆದ್ರೆ ಈ ತಂಡಕ್ಕೆ ಸ್ವಾಗತ ಕೋರಿರುವುದು ಎಷ್ಟು ಸರಿ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಅಮಾಯಕರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025

    ಕಾಲ್ತುಳಿತ ಪ್ರಕರಣ: ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ!

    June 7, 2025

    ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಬೇಳೂರು ಗೋಪಾಲಕೃಷ್ಣ

    June 7, 2025

    Corona Virus: ದೇಶದಲ್ಲಿ ಇಂದು 391 ಮಂದಿಗೆ ಕೊರೋನಾ ಸೋಂಕು..! ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ವಾಹನ ಸವಾರರ ಗಮನಕ್ಕೆ: ಇಂದು ಈ ರಸ್ತೆಗಳಲ್ಲಿ ಸಂಚಾರ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ!

    June 7, 2025

    ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸಚಿವ ಅಮಿತ್ ಶಾ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಸಾಧ್ಯತೆ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.