ಹುಬ್ಬಳ್ಳಿ:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್. 4ರಂದು ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಡಿಸ್ಟ್ರಿಕ್ಟ್ ಜನರಲ್ ಸೆಕ್ರೆಟರಿ ದತ್ತಮೂರ್ತಿ ಕುಲಕರ್ಣಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್..!
ಆರ್ ಸಿಬಿ ವಿಜಯೋತ್ಸವಕ್ಕೆ ಅನುಮತಿ ಬೇಡಾ ಎಂದು ಪೊಲೀಸ್ ಅಧಿಕಾರಿಗಳು ಸರಕಾರಕ್ಕೆ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಸರಕಾರ ತನ್ನ ಬೇಜಾಬ್ದಾರಿತನ ಮೆರಿದಿದೆ. ಪೊಲೀಸ್ ಅಧಿಕಾರಿಗಳ ಮಾತನ್ನ ಸರಕಾರ ಕೇಳಿಲ್ಲ. ಯಾರದೋ ತಪ್ಪನ್ನ ಯಾರದೋ ಮೇಲೆ ಹಾಕಿದೆ. ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನ ಬಲಪಶು ಮಾಡಲಾಗಿದೆ.
ಬೆಂಗಳೂರು ಪೊಲೀಸ್ ಕಮೀಷನರ್ ದಯಾನಂದ ನಿಷ್ಠಾವಂತ ಅಧಿಕಾರಿ. ತಮ್ಮ ಮಕ್ಕಳ ಹುಟ್ಟು ಹಬ್ಬದ ಆಚರಣೆಗೆ ಸಹ ಹೋಗದೇ ಕರ್ತವ್ಯ ನಿರ್ವಹಿಸಿದ್ದಾರೆ. ಬದ್ಧತೆವುಳ್ಳ ಪೊಲೀಸ್ ಅಧಿಕಾರಿಗಳ ತಲೆದಂಡ ಯಾವ ನ್ಯಾಯ. ಕೂಡಲೇ ಸಿಎಂ,ಡಿಸಿಎಂ,ಹೋಂ ಮಿನಿಸ್ಟರ್ ರಾಜೀನಾಮೆ ಕೊಡಬೇಕು. ಇಷ್ಟೇಕ್ಕೆ ನಾವು ಬಿಡಲ್ಲ. ಉಗ್ರ ಸ್ವರೂಪದ ಹೋರಾಟ ಮಾಡುತ್ತೇವೆ ಎಂದಿದ್ದಾರೆ.