ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿತ್ತು. ಪಂಜಾಬ್ ವಿರುದ್ಧ ಬೆಂಗಳೂರು 6 ರನ್ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ದೀಪಾವಳಿಯಂಥಹ ಸಂಭ್ರಮ ಇತ್ತು.
ಇದೇ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಆ ಬಳಿಕ 11 ಮಂದಿ ಸಾವನ್ನಪ್ಪಿದ್ದರು. ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ, RCB ಪ್ರಾಂಚೈಸಿ ವಿರುದ್ಧ ಅಕ್ರೋಶ ಭುಗಿಲೆದ್ದಿದೆ.
ಇನ್ನೂ ಈ ಅವಘಡದಲ್ಲಿ ಪರಿಸರಕ್ಕೂ ಹಾನಿ ಆಗಿದ್ದು, ಇದೀಗ ದೂರು ದಾಖಲಾಗಿದೆ. ಘಟನೆಯಿಂದ ಕಬ್ಬನ್ ಪಾರ್ಕ್ನ ಗಿಡ, ಮರಗಳಿಗೂ ಹಾನಿ ಉಂಟಾಗಿದೆ. ಹೀಗಾಗಿ ಕಬ್ಬನ್ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಉಮೇಶ್ರಿಂದ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಆರ್ಸಿಬಿ ಐಪಿಎಲ್ನಲ್ಲಿ ಕಪ್ ಗೆಲ್ಲುವ ಮೂಲಕ ಕನ್ನಡಿಗರ 18 ವರ್ಷದ ಕನಸು ನನಸಾಗಿತ್ತು. ಇದೇ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತದಿಂದ 11 ಜನ ಅಮಾಯಕರು ಪ್ರಾಣ ತೆತ್ತರು. ಆದರೆ ವಿಧಾನಸೌಧ ಹಾಗೂ ಹೈಕೋರ್ಟ್ ಮುಂಭಾಗದಲ್ಲಿ ಸೇರಿದ ಭಾರಿ ಜನರ ದಟ್ಟಣೆಯಿಂದಾಗಿ ಬ್ಯಾರಿಕೇಡ್ಗಳು, ನೆಲಮಟ್ಟದ ಗಿಡಗಳನ್ನು ಅಥವಾ ಆರ್ನಮೆಂಟಲ್ ಪ್ಲಾಂಟ್ಸ್ಗಳನ್ನು ಜನ ತುಳಿದು ಹಾಕಿದ್ದಾರೆ. ಇದರಿಂದಾಗಿ ಗಿಡಗಳೆಲ್ಲಾ ಮುರಿದು ಒಣಗಿ ಹೋಗಿ ಸರ್ವನಾಶವಾಗಿವೆ.
ಕೇವಲ ವಿಧಾನಸೌಧ ಮುಂಭಾಗದ ಗಿಡಗಳಿಗೆ ಮಾತ್ರ ಹಾನಿಯಾಗಿಲ್ಲ. ಎದುರುಗಡೆ ಇರುವ ಕಬ್ಬನ್ ಪಾರ್ಕ್ನ ಗೇಟ್ನ್ನು ಹಾರಿ ಜನ ಬಂದಿದ್ದರು. ಜೊತೆಗೆ ಪ್ರಾಣವನ್ನು ಲೆಕ್ಕಿಸದೇ ಮರವೇರಿ ಕುಳಿತ್ತಿದ್ದರು. ಇದರಿಂದ ಸಾಕಷ್ಟು ಮರಗಳಿಗೂ ಡ್ಯಾಮೇಜ್ ಉಂಟಾಗಿದೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರ್ಸಿಬಿ, ಕೆಎಸ್ ಸಿಎ, ಡಿಎನ್ಎ ವಿರುದ್ದ ಸಿಡಿ ಸಾಕ್ಷಿ ಸಮೇತ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.