ಬೆಂಗಳೂರು:- ಕಾಲ್ತುಳಿತ ಕೇಸ್ ಗೆ ಸಂಬಂಧಿಸಿದಂತೆ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ ಸೇರಿ ನಾಲ್ವರಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
Narendra Modi: ಏರ್ ಇಂಡಿಯಾ ವಿಮಾನ ದುರಂತಕ್ಕೆ PM ಪ್ರಧಾನಿ ಮೋದಿ ಸಂತಾಪ!
ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಷರತ್ತು ಬದ್ಧ ಜಾಮೀನು ನೀಡಿದೆ. ಅಲ್ಲದೆ, ಶಮಂತ್ ಮಾವಿನಕೆರೆಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ನ್ಯಾಯಪೀಠ ಆದೇಶಿದೆ. ಆರೋಪಿಗಳು ದೇಶ ಬಿಟ್ಟು ತೆರಳದಂತೆ ನಿರ್ಬಂಧಿಸಿರುವ ಹೈಕೋರ್ಟ್, ಪಾಸ್ ಪೋರ್ಟ್ ಸರಂಡರ್ ಮಾಡುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ.