ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದಿದ್ದ ಕಾಲ್ತುಳಿತದಲ್ಲಿ ಸುಮಾರು 11 ಮಂದಿ ಉಸಿರು ಚಲ್ಲಿದ್ದರು. ಅಲ್ಲದೇ ಸಾಕಷ್ಟು ಮಂದಿ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ನಡೆದ ಬೆನ್ನಲ್ಲೇ ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಘೋಷಿಸಿ ಆದೇಶ ಹೊರಡಿಸಿತ್ತು. ಆದರೆ ಈ ಪರಿಹಾರ ಹೆಚ್ಚಿಸುವಂತೆ ಸ್ವಪಕ್ಷದವರು ಸೇರಿ ವಿಪಕ್ಷದವರು ಸರ್ಕಾರಕ್ಕೆ ಆಗ್ರಹಿಸಿದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ಈ ಹಿಂದೆ ಘೋಷಿಸಿದ್ದ ತಲಾ 10 ಲಕ್ಷ ಪರಿಹಾರವನ್ನು ಇದೀಗ 25 ಲಕ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ.
ಘಟನೆ ವಿವರ:
ಜೂನ್ 4 ರಂದು RCB ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ಗಳ ಬಳಿ ಕಾಲ್ತುಳಿತ ಸಂಭವಿಸಿತ್ತು. ಇದರಲ್ಲಿ 11 ಮಂದಿ ಸಾವನ್ನಪ್ಪಿದ್ದು, 47 ಮಂದಿ ಗಾಯಗೊಂಡಿದ್ದರು. ಉಚಿತ ಪ್ರವೇಶವಿದೆ ಎಂಬ ವದಂತಿ ಹಬ್ಬಿದ್ದರಿಂದ ಅಪಾರ ಸಂಖ್ಯೆಯ ಜನರು ಕ್ರೀಡಾಂಗಣದತ್ತ ಧಾವಿಸಿದರು. ಕಿರಿದಾದ ಪ್ರವೇಶ ದ್ವಾರಗಳ ಮೂಲಕ ಸಾವಿರಾರು ಜನರು ಒಳನುಗ್ಗಲು ಪ್ರಯತ್ನಿಸಿದಾಗ ನೂಕುನುಗ್ಗಲು ಉಂಟಾಗಿ ದುರಂತ ಸಂಭವಿಸಿತು.