Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    By AIN AuthorJune 7, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಹದಿನೆಂಟು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ಸ್ ನಲ್ಲಿ ವಿಜಯದ ನಗೆ ಬೀರಿತ್ತು. ಈ ಹಿನ್ನೆಲೆಯಲ್ಲಿ ತಂಡದ ಅಭಿಮಾನಿಗಳ ಹರ್ಷೋಲ್ಲಾಸ ಮೇರೆಮೀರಿತ್ತು. ಈ ನಡುವೆ ಬೆಂಗಳೂರಿನಲ್ಲಿ ಆರ್ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂಧನ ಸಮಾರಂಭ ನಡೆಸಲು ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿತ್ತು. ಜತೆಗೆ ರಾಜ್ಯ ಸರಕಾರ ಸಹ ತಾನೇನೂ ಕಮ್ಮಿ ಎಂಬಂತೆ ಆರ್ಸಿಬಿ ತಂಡಕ್ಕೆ ವಿಧಾನಸೌಧದ ಮೆಟ್ಟಿಲುಗಳ ಬಳಿ ಸನ್ಮಾನ ಕಾರ್ಯಕ್ರಮ ಫಿಕ್ಸ್ ಮಾಡಿತು. ಆದ್ರೆ, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಸಿಲುಕಿ 12 ಮಂದಿ ಅಮಾಯಕ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಇನ್ನು ಈ ಘಟನೆಗೆ ರಾಜ್ಯ ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ.

    ಈ ರಾಶಿಯ ಕಮಿಷನ್ ಏಜೆಂಟರಿಗೆ ಧನ ಲಾಭ: ಶನಿವಾರದ ರಾಶಿ ಭವಿಷ್ಯ 07 ಜೂನ್ 2025

    ಐಪಿಎಲ್ ಇತಿಹಾಸ ನೋಡಿದರೆ ತಿಳಿಯುತ್ತದೆ ಆರ್ಸಿಬಿಗೆ ಇರುವ ಕಲ್ಟ್ ಫ್ಯಾನ್ಸ್ ಎಂಥದ್ದು ಎಂಬುದು. ಆದರೆ ಇದನ್ನು ಅರಿಯುವಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಯಿತು.

    ಇನ್ನೂ ಆರ್‌ಸಿಬಿಯ ವಿಧಾನಸೌಧ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೀಡಿದ್ದ ಅನುಮತಿ ಪತ್ರ ಲಭ್ಯವಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, 19 ಷರತ್ತು ವಿಧಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಅನುಮತಿ ನೀಡಿದ್ದಾರೆ. ಏನೆಲ್ಲಾ ಷರತ್ತುಗಳನ್ನ ವಿಧಿಸಿತ್ತು ಎನ್ನುವುದು ಈ ಕೆಳಗಿನಂತಿದೆ.

    <span;>* ಜನಸಂದಣಿ ಹೆಚ್ಚಾಗಿ ಸೇರುವ ಕಾರಣ ಈ ಕಾರ್ಯಕ್ರಮವನ್ನು ನಡೆಸುವಾಗ ಭವ್ಯ ಮೆಟ್ಟಿಲಿಗಾಗಲಿ (ಗ್ರಾಂಡ್ ಸ್ಟೆಪ್ಸ್), ಪ್ರತಿಮೆಗಾಗಲಿ, ರಸ್ತೆಗಾಗಲಿ, ಉದ್ಯಾನವನಕ್ಕಾಗಲಿ ಯಾವುದೇ ರೀತಿಯ ಧಕ್ಕೆಯಾಗದಂತೆ ಮುಂಜಾಗ್ರತೆ ವಹಿಸತಕ್ಕದು. ತಪ್ಪಿದಲ್ಲಿ ಯಾವುದೇ ರೀತಿಯ ಅನಾಹುತ ಸಂಭವಿಸಿದಲ್ಲಿ ಅದರ ಸಂಪೂರ್ಣ ದುರಸ್ತಿ ಅಥವಾ ವೆಚ್ಚವನ್ನು ಭರಿಸಲು ಸಿದ್ಧರಿರತಕ್ಕದ್ದು.

    <span;>* ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ಕಾರ್ಯಕ್ರಮವನ್ನು ನಡೆಸತಕ್ಕದು. ಈ ಕುರಿತು ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಕ್ರಮವಹಿಸುವುದು.

    <span;>* ಕಛೇರಿ ಕೆಲಸ ಕಾರ್ಯಗಳಿಗೆ ಯಾವುದೇ ತೊಂದರೆ ಆಗದಂತೆ ಕಾರ್ಯಕ್ರಮ ನಡೆಸಬೇಕು.

    <span;>* ಕಾರ್ಯಕ್ರಮ ನಡೆಯುವ ಸ್ಥಳವನ್ನು ಸ್ವಚ್ಛವಾಗಿರಿಸುವುದು.

    <span;>* ಪ್ಲಾಸ್ಟಿಕ್ ಬಾಟಲಿ/ವಸ್ತುಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕ ಬಳಕೆಗಾಗಿ ಪೇಪರ್/ಗಾಜಿನ ಗ್ಲಾಸ್ ಬಳಸುವಂತೆ ಕೋರಿದ.

    <span;>* ಸದರಿ ಕಾರ್ಯಕ್ರಮಕ್ಕೆ ಬರುವ ಆಹ್ವಾನಿತರಿಗೆ ಲಘು ಉಪಾಹಾರ ಅಥವಾ ಭೋಜನ ಕೂಟವನ್ನು ಏರ್ಪಡಿಸಿದಲ್ಲಿ, ಹೊರಗಡೆಯಿಂದ ಸಿದ್ಧಪಡಿಸಿದ ಆಹಾರ ಪದಾರ್ಥಗಳನ್ನು ತರತಕ್ಕದ್ದು. ಯಾವುದೇ ಗ್ಯಾಸ್ ಸಿಲಿಂಡರ್‌ನ್ನು ತರುವಂತಿಲ್ಲ ಹಾಗೂ ವಿಧಾನಸೌಧದ ಪೂರ್ವ ದ್ವಾರದ ಹೊರ ಆವರಣದ ಬಲಭಾಗದಲ್ಲಿ ಮಾತ್ರ ಉಪಹಾರ ವ್ಯವಸ್ಥೆಯನ್ನು ಮಾಡಿಕೊಳ್ಳತಕ್ಕದ್ದು, ಉಪಹಾರ ವ್ಯವಸ್ಥೆಯನ್ನು ಮಾಡುವ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯು ಭದ್ರತಾ ಠೇವಣಿಯಾಗಿ ಮುಂಗಡವಾಗಿ ರೂಪಾಯಿ 10 ಸಾವಿರ ಪಾವತಿಸತಕ್ಕದ್ದು. ಕಾರ್ಯಕ್ರಮ ಮುಗಿದ ನಂತರ ಯಾವುದೇ ದೂರಗಳಿಲ್ಲದಿದ್ದಲ್ಲಿ ಸದರಿ ಮೊತ್ತವನ್ನು ಸಂಬಂಧಪಟ್ಟ ಸಂಸ್ಥೆಗೆ ಹಿಂತಿರುಗಿಸಲಾಗುವುದು.

    ಭವ್ಯ ಮೆಟ್ಟಿಲ ಮೇಲೆ ಸೈಜ್ ಅಳವಡಿಸಿದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ನಂ.2, ಕಟ್ಟಡಗಳ ಉಪ ವಿಭಾಗ, ಲೋಕೋಪಯೋಗಿ ಇಲಾಖೆ, ವಿಧಾನಸೌಧ ಇವರ ಧೃಢೀಕರಣ ಪಡೆಯುವುದು ಕಡ್ಡಾಯವಾಗಿರುತ್ತದೆ.
    ಕಾರ್ಯಕ್ರಮಕ್ಕೆ ಸಿದ್ಧತೆ ಮಾಡುವಾಗ, ನಡೆಸುವಾಗ ಯಾವುದೇ ರೀತಿಯ ಅವಘಡ ಸಂಭವಿಸಿದರೆ ತಮ್ಮ ಸಂಸ್ಥೆಯೇ ಪೂರ್ಣ ಜವಾಬ್ದಾರಿಯಾಗಿರುತ್ತದೆ.
    ವಿದ್ಯುತ್ ಉಪಕರಣಗಳನ್ನು ಆಳವಡಿಸಿದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ನಂ.5, ವಿದ್ಯುತ್ ಉಪ ವಿಭಾಗ, ಲೋಕೋಪಯೋಗಿ ಇಲಾಖೆ, ವಿಧಾನಸೌಧ ಇವರ ಧೃಢೀಕರಣ ಪಡೆಯುವುದು ಕಡ್ಡಾಯವಾಗಿರುತ್ತದೆ.

    ಆಹ್ವಾನ ಪತ್ರಿಕೆ ಸಿದ್ಧಪಡಿಸುವಾಗ ಸಿಆಸುಇ (ರಾಜ್ಯ ಶಿಷ್ಟಾಚಾರ) ಇವರ ಧೃಢೀಕರಣ ಪಡೆಯುವುದು ಕಡ್ಡಾಯವಾಗಿರುತ್ತದೆ.
    ವಿಧಾಸೌಧ ಕಟ್ಟಡದ ಸುತ್ತಮುತ್ತಲಿನ ಪುದೇಶವನ್ನು ಡೋನ್ ನಿಷೇಧಿತ ಪ್ರದೇಶವೆಂದು ಗುರುತಿಸಿರುವುದರಿಂದ ಡೋನ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
    ಅಗ್ನಿಶಾಮಕ ಇಲಾಖೆಯಿಂದ ಮುಂಜಾಗೃತ ಕ್ರಮವಾಗಿ ಅಗ್ನಿ ಶಾಮಕ ವಾಹನ ಮತ್ತು ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವುದು.

    ಮುಂಜಾಗೃತ ಕ್ರಮವಾಗಿ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಶುಶ್ರೂಕ ಸಿಬ್ಬಂದಿಗಳನ್ನು ನೇಮಿಸಿಕೊಳ್ಳವುದು.
    ಕಾರ್ಯಕ್ರಮಕ್ಕೆ ಅಗತ್ಯ ಟೆಂಟ್ ಇನ್ನಿತರ ವ್ಯವಸ್ಥೆ ಕಲ್ಪಿಸಿದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರು/ಆಯೋಜಕರು ಭದ್ರತಾ ಠೇವಣಿಯಾಗಿ ರೂ.15.00 {ರೂಪಾಯಿಗಳು ಹದಿನೈದು ಲಕ್ಷ ಮಾತ್ರ} ಲಕ್ಷಗಳನ್ನು ಪಾವತಿಸತಕ್ಕದ್ದು.

    ಕಾರ್ಯಕ್ರಮಕ್ಕಾಗಿ ಅಳವಡಿಸಲಾಗಿರುವ ಪೀಠೋಪಕರಣಗಳನ್ನು ಕಾರ್ಯಕ್ರಮ ಮುಕ್ತಾಯಗೊಂಡ 3 ಗಂಟೆಯೊಳಗಾಗಿ ತೆರವುಗೊಳಿಸತಕ್ಕದ್ದು, ಇಲ್ಲದಿದ್ದಲ್ಲಿ, ಪಾವತಿಸಲಾಗಿರುವ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

    ವಿಧಾನಸೌಧದ ಆವರಣದ ಹೊರಗಡೆ ಜನ ಸೇರುವುದರಿಂದ ಪೊಲೀಸ್ ಆಯುಕ್ತರು, ಬೆಂಗಳೂರು ನಗರ, ಆಯುಕ್ತರು, ಬಿ.ಬಿ.ಎಂ.ಪಿ ಮತ್ತು ಇನ್ನಿತರ ಸಂಬಂಧಪಟ್ಟ ಪ್ರಾಧಿಕಾರಿಗಳ ಪೂರ್ವನುಮತಿ ಪಡೆದು ಕಾರ್ಯಕ್ರಮ ನಡೆಸತಕ್ಕದ್ದು.

    ಆಹ್ವಾನ ಪತ್ರಿಕೆಯೊಂದಿಗೆ ಈ ಕಾರ್ಯಕ್ರಮಕ್ಕೆ ಆಗಮಿಸುವ ಆಹ್ವಾನಿತರು, ಗಣ್ಯರು ಮತ್ತು ಕಾರ್ಯಕ್ರಮಕ್ಕೆ ಬರುವ ಇತರೆಯವರನ್ನು ಗುರುತಿಸಿ ಬಿಡಿಸುವ ಜವಾಬ್ದಾರಿ ಸಂಬಂಧಪಟ್ಟ ತಮ್ಮದೇ ಆಗಿರುತ್ತದೆ. ಈ ಸಂಬಂಧ ಉಪ ಪೊಲೀಸ್ ಆಯುಕ್ತರು ವಿಧಾನಸೌಧ ಭದ್ರತೆ ಇವರೊಡನೆ ಕೂಡಲೇ ಸಮಾಲೋಚಿಸಿ ಅವಶ್ಯಕ ಕ್ರಮ ತೆಗೆದುಕೊಳ್ಳತಕ್ಕದು.

    Demo
    Share. Facebook Twitter LinkedIn Email WhatsApp

    Related Posts

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ: 10 ಕ್ಕೂ ಹೆಚ್ಚು ಮಂದಿಗೆ ಗಾಯ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಕಾಂಗ್ರೆಸ್-BJPಯವರು ಒದ್ರೆ ಒದ್ದಿಸಿಕೊಳ್ಳಬೇಕು, ಅವರ ಮನೆ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಬೇಕು: ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು

    June 6, 2025

    ಕಾಲ್ತುಳಿತ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ – ಆರ್.ಅಶೋಕ್

    June 6, 2025

    ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ಪೊಲೀಸರ ತಲೆ ದಂಡಕ್ಕೆ ನಿಖಿಲ್ ಕುಮಾರಸ್ವಾಮಿ ಖಂಡನೆ

    June 6, 2025

    ಕಾಲ್ತುಳಿತ ಪಕರಣ: CM ರಾಜಕೀಯ ಕಾರ್ಯದರ್ಶಿ ಗೋವಿಂದರಾಜುಗೆ ಕೊಕ್!

    June 6, 2025

    Chinnaswamy Stampede: ಗುಪ್ತಚರ ಇಲಾಖೆ ವೈಫಲ್ಯ ಹಿನ್ನೆಲೆ: ADGP ಹೇಮಂತ್ ನಿಂಬಾಳ್ಕರ್ ವರ್ಗಾವಣೆ!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.