ಬೆಂಗಳೂರು: ಕೆಲವು ಸಮುದಾಯಗಳನ್ನ ಮೇಲೆ ಎತ್ತೋದು, ಕೆಲವು ಜಾತಿಗಳನ್ನು ಕೆಳಗೆ ತುಳಿಯೋ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಜಾತಿಗಣತಿ ಮಾಡೋದು ಬೇಡ ಎಂದು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು. ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ಜಾತಿಗಣತಿ ಮಾಡುತ್ತಿರುವಾಗ ರಾಜ್ಯ ಸರ್ಕಾರದಿಂದ ಮತ್ತೊಂದು ಜಾತಿಗಣತಿ ಮಾಡುವ ಅವಶ್ಯಕತೆ ಇಲ್ಲ ಎಂದರು.
ನಿಮ್ಮ ಮನೆಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿ ಆಗಿದ್ಯಾ!? ಹಾಗಿದ್ರೆ ಹೀಗೆ ಮಾಡಿ!
ಈಗಾಗಲೇ 180 ಕೋಟಿ ರೂ. ಖರ್ಚು ಮಾಡಿದ್ದೀರಾ. ಮತ್ತೆ ಜಾತಿಗಣತಿ ಮಾಡಿದರೆ ಮತ್ತೆ ಜನರ ತೆರಿಗೆ ಹಣ ಖರ್ಚು ಆಗುತ್ತದೆ. ಎಷ್ಟೇ ಹಣ ಖರ್ಚು ಮಾಡಿದರೂ ನೀವು ಸರಿಯಾಗಿ ಜಾತಿಗಣತಿ ಮಾಡುವುದಿಲ್ಲ. ನಿಮ್ಮ ರಾಜಕೀಯ ಲಾಭಕ್ಕಾಗಿ ಜಾತಿಗಣತಿ ಘೋಷಣೆ ಮಾಡಿದ್ದೀರಾ. ಕೆಲವು ಸಮುದಾಯಗಳನ್ನ ಮೇಲೆ ಎತ್ತೋದು, ಕೆಲವು ಜಾತಿಗಳನ್ನು ಕೆಳಗೆ ತುಳಿಯೋ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಜಾತಿಗಣತಿ ಮಾಡೋದು ಬೇಡ ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ ಎಂದಿದ್ದಾರೆ. ಆದರೆ ಇಲ್ಲಿ ರಾಜಕೀಯ ಅಜೆಂಡಾ ಮುಂದೆ ಇಟ್ಟುಕೊಂಡು ಇದನ್ನ ಮಾಡುತ್ತಿದ್ದಾರೆ. ನಿಮ್ಮ ನಿಮ್ಮ ರಾಜಕೀಯ ಭವಿಷ್ಯ ಕಟ್ಟೋಕೆ ಈ ಜಾತಿಗಣತಿ ಮಾಡ್ತಿದ್ದೀರಾ. ಕೆಲವು ಜಾತಿ ಜಾಸ್ತಿ ತೋರಿಸೋದು, ಕೆಲವು ಕಡಿಮೆ ತೋರಿಸುವ ಕೆಲಸ ಮಾಡುತ್ತೀರಾ. ರಾಜ್ಯದ ಜಾತಿಗಣತಿ ಉದ್ದೇಶ, ದುರುದ್ದೇಶ ಬೇರೆಯೇ ಇದೆ ಎಂದು ಆರೋಪಿಸಿದರು.