ಕೋಲಾರ: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದ್ದು, ಇಬ್ಬರು ಬಾಲಕರನ್ನು ಆರ್ಪಿಎಫ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
15 ಮಂದಿ ಮುಸ್ಲಿಂ ಹುಡುಗರ ಗುಂಪು ಈ ಕೃತ್ಯ ಮಾಡಿದ್ದು, 13 ಹುಡುಗರು ಓಡಿ ಕಲ್ಲು ತೂರಿ ಪರಾರಿಯಾಗಿದ್ದಾರೆ.ಇಬ್ಬರು ಮಾತ್ರ ಬಂಗಾರಪೇಟೆ ಅರ್ ಪಿಎಫ್ ಸಿಕ್ಕಿಬಿದ್ದಿದ್ದಾರೆ.
ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!
ಬಂಧಿತರನ್ನು ವಿಚಾರಣೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ. ಇಬ್ಬರೂ ಬಾಲಕರು ಅಪ್ರಾಪ್ತರಾಗಿದ್ದು, ಪೋಷಕರಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ. ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ.