ಮಂಗಳೂರು: ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಸುಹಾಶ್ ಶೆಟ್ಟಿ ಇದ್ದ ಕಾರ್ಗೆ ಗೂಡ್ಸ್ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಸುಹಾಸ್ ಶೆಟ್ಟಿ ಕೊಲೆ ಕೇಸ್ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ಬೇಸಿಗೆಯಲ್ಲಿ ಮೊಟ್ಟೆ ತಿಂದ್ರೆ ನಿಮಗೆ ಅನಾರೋಗ್ಯ ಕಾಡುತ್ತೆ..! ಇದನ್ನು ನೀವೂ ನಂಬಲೆಬೇಕು
ಇದೀಗ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅಲಿಯಾಸ್ ಚೊಟ್ಟೆ ನೌಷದ್(39) ಬಂಧಿತರು. ಮೂವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದರು.
ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿದ್ದವು. ಈತ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ, ಕೊಲೆಗೆ ಸಹಕರಿಸಿದ್ದಾನೆ. ಆರೋಪಿಗಳು ಕೊಲೆ ಮಾಡಿದ ನಂತರ ಕಾರಿನಲ್ಲಿ ಪರಾರಿಯಾಗಲು ಆರೋಪಿ ಅಬ್ದುಲ್ ಖಾದರ್ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.
ಆರೋಪಿ ನೌಷದ್ ವಿರುದ್ಧ ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.
ಆರೋಪಿಗಳ ಪೈಕಿ ಅಜರುದ್ದೀನ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಬ್ದುಲ್ ಖಾದರ್ ಹಾಗೂ ನೌಷದ್ ಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಎಂಟು ಜನರ ಬಂಧಿಸಿದ್ದಾರೆ.