ಮಂಗಳೂರು:- ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ ಬಂಧಿತ ಆರೋಪಿ.
ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ವಿಜಯೇಂದ್ರ!
ಅಬ್ದುಲ್ ರಜಾಕ್ ಪ್ರಮುಖ ಆರೋಪಿಗಳ ಜೊತೆ ಸೇರಿ ಹತ್ಯೆಗೆ ಸಂಚು ರೂಪಿಸಿರುವುದು ಮತ್ತು ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್ನ ತಂದೆಯಾಗಿದ್ದಾನೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್ ಜೊತೆ ಸೇರಿ ಸುಹಾಸ್ ಶೆಟ್ಟಿ ಕೊಲೆಗೆ ಅಬ್ದುಲ್ ರಜಾಕ್ ಸಂಚು ರೂಪಿಸಿದ್ದಾನೆ ಎಂಬ ಆರೋಪಿವಿದೆ.
ಕಳೆದ ಗುರುವಾರ ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.