ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕುರಿತ ವಿವಾದಾತ್ಮಕ ಪೋಸ್ಟ್ಗೆ ಸಂಬಂಧಿಸಿದಂತೆ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಪ್ರಕರಣದ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ತನಿಖೆಯ ವಿಷಯವಾಗಿರುವ ಈ ಎರಡು ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಯಾವುದೇ ಆನ್ಲೈನ್ ಲೇಖನವನ್ನು ಬರೆಯಬಾರದು ಅಥವಾ ಯಾವುದೇ ಆನ್ಲೈನ್ ಭಾಷಣವನ್ನು ಮಾಡಬಾರದು ಎಂದು ಅಲಿ ಖಾನ್ ಮಹ್ಮದಾಬಾದ್ಗೆ ನಿರ್ದೇಶಿಸಲಾಗಿದೆ.
ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!
ಭಾರತದ ನೆಲದಲ್ಲಿ ನಡೆದ ಭಯೋತ್ಪಾದಕ ದಾಳಿಗಳ ಬಗ್ಗೆ ಅಥವಾ ನಮ್ಮ ರಾಷ್ಟ್ರ ನೀಡಿದ ಪ್ರತೀಕಾರದ ಪ್ರತಿಕ್ರಿಯೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಸುಪ್ರೀಂ ಕೋರ್ಟ್ ಅವರನ್ನು ನಿರ್ಬಂಧಿಸಿದೆ. ಜೊತೆಗೆ ತಮ್ಮ ಪಾಸ್ಪೋರ್ಟ್ ಸಲ್ಲಿಸಲು ತಿಳಿಸಿದೆ.
ಇದರೊಂದಿಗೆ, ಮೂವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ರಚನೆಗೂ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಮಿತಿಯು ರಾಜ್ಯದ ಹೊರಗಿನಿಂದ ಬಂದಿರುವ ಒಬ್ಬ ಮಹಿಳಾ ಅಧಿಕಾರಿಯನ್ನು ಸಹ ಒಳಗೊಂಡಿರುತ್ತದೆ. 24 ಗಂಟೆಗಳ ಒಳಗೆ ಎಸ್ಐಟಿ ರಚಿಸುವಂತೆ ನಿರ್ದೇಶಿಸಿದ್ದು, ಅಸೋಸಿಯೇಟ್ ಪ್ರೊಫೆಸರ್ ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ಹೇಳಿದೆ.
ಮಹ್ಮದಾಬಾದ್ ಅವರನ್ನು ಮೇ 27ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಕಸ್ಟಡಿ ಅವಧಿ ಪೂರ್ಣಗೊಂಡ ನಂತರ, ಪೊಲೀಸರು ಪ್ರೊ.ಅಲಿಯನ್ನು ಜೆಎಂಐಸಿ ಆಜಾದ್ ಸಿಂಗ್ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ಪೊಲೀಸರು ಪ್ರಾಧ್ಯಾಪಕರನ್ನು ಇನ್ನೂ ಏಳು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ ನ್ಯಾಯಾಲಯ ಈ ಬೇಡಿಕೆಯನ್ನು ತಿರಸ್ಕರಿಸಿತು.