Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಗ್ರಾಮೀಣ ಭಾಗದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ – ಬಿ.ನಾಗೇಂದ್ರ

    By AIN AuthorDecember 6, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು/ಬೆಳಗಾವಿ:- ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳ ಕೊರತೆಯಿಂದಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

    ಬೆಂಗಳೂರು ಹಾಗೂ ಇತರ ನಗರ ಪ್ರದೇಶಗಳ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳ ಕೊರತೆಯಿಂದಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ. ಹಾಗೆಯೇ ಪ್ರತಿ ಜಿಲ್ಲೆಯಲ್ಲೂ ಸಿಂಥೆಟಿಕ್ ಟ್ರ್ಯಾಕ್‌ಗಳ ನಿರ್ಮಾಣದ ಬಗ್ಗೆ ಹೇಳಲಾಗಿತ್ತು. ಈ ಯೋಜನೆಯ ಎಲ್ಲಿಯವರೆಗೆ ತಲುಪಿದೆ ಎಂದು ಕೇಳಿದರು.

    ಇದಕ್ಕೆ ಉತ್ತರಿಸಿದ ಸಚಿವ ನಾಗೇಂದ್ರ, ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತಿ ಯೋಜನೆಯಡಿ 75 ಮಂದಿಯನ್ನು ಆಯ್ಕೆ ಮಾಡಿಕೊಂಡು ತರಬೇತಿ ಕೊಡಿಸಲಾಗುತ್ತಿದೆ. ಜೊತೆಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಸೇರಿದಂತೆ ಹಲವು ಸೌಲಭ್ಯಗಳ ಮೂಲಕ ಕ್ರೀಡೆಗೆ ಬೆಂಬಲ ನೀಡಲಾಗುತ್ತಿದೆ ಎಂದರು.

    2024ರ ಒಲಿಂಪಿಕ್ ಕ್ರೀಡೆಗೆ ಸಜ್ಜುಗೊಳ್ಳುವ ಕ್ರೀಡಾಪಟುಗಳಿಗೆ ಆಹಾರದಿಂದ ಹಿಡಿದು ಎಲ್ಲಾ ರೀತಿಯ ಕಾಳಜಿಯನ್ನು ವಹಿಸಲಾಗುತ್ತಿದೆ. ಪ್ರತಿಯೊಬ್ಬರ ತರಬೇತಿಗೆ 10 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. 180 ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಬಗ್ಗೆ ತರಬೇತಿ ನಡೆಯುತ್ತಿದೆ. ಶೀಘ್ರವೇ ಅವರು ಸೇವೆಗೆ ಸಮರ್ಪಣೆಗೊಳ್ಳಲಿದ್ದಾರೆ. ಈ ಮೂಲಕ ತರಬೇತುದಾರರ ಕೊರತೆಯೂ ನೀಗಲಿದೆ ಎಂದು ಹೇಳಿದರು.

    ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ನಾಗೇಂದ್ರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಧೀನದಲ್ಲಿ ರಾಜ್ಯಾದ್ಯಂತ 125 ಕ್ರೀಡಾಂಗಣಗಳಿವೆ. ಕ್ರೀಡಾಂಗಣಗಳ ಅಭಿವೃದ್ಧಿಗೆ 5,622 ಲಕ್ಷ ರೂಪಾಯಿಗಳನ್ನು 2 ವರ್ಷಗಳಿಂದ ಬಿಡುಗಡೆ ಮಾಡಲಾಗಿದೆ. ಹಣಕಾಸು ಲಭ್ಯತೆ ನೋಡಿಕೊಂಡು 16 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕ್ರೀಡಾಂಗಣಗಳ ನಿರ್ಮಾಣವನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    Shubhanshu Shukla: ಶುಭಾಂಶು ಶುಕ್ಲಾ ಗಗನಯಾತ್ರೆಗೆ ಕ್ಷಣಗಣನೆ..! 40 ವರ್ಷದ ಬಳಿಕ ISSನತ್ತ ಭಾರತ

    June 25, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

    June 25, 2025

    ಅಬ್ಬಬ್ಬಾ.. ಜನರು ಹೆಚ್ಚು ಖರ್ಚು ಮಾಡೋದು ಇದಕ್ಕೇನಾ..? ವರದಿಯಲ್ಲಿ ಶಾಕಿಂಗ್ ವಿಷಯ ಬಯಲು

    June 25, 2025

    ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುವವರ ವಿರುದ್ಧ ಸಿಎಂ-ಡಿಸಿಎಂ ಕ್ರಮ ತಗೊತಾರೆ: ಎಂಬಿ ಪಾಟೀಲ್!

    June 25, 2025

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025

    ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?

    June 24, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

    June 24, 2025

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 24, 2025

    ಯಾವ ರೋಗವೂ ನಿಮ್ಮ ಬಳಿ ಸುಳಿಯದಿರಲು ನಿತ್ಯ ಒಂದು ಹಿಡಿ ಈ ಸೊಪ್ಪು ತಿನ್ನಿ!

    June 24, 2025

    Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಕಟ್‌!

    June 24, 2025

    ನನಗೆ ಅಪಮಾನ ಮಾಡಿದ ಅಧಿಕಾರಿ ರಾಜೇಂದ್ರ ಕಠಾರಿಯ ವಿರುದ್ಧ ಸರ್ಕಾರ ಕ್ರಮ ಜರುಗಿಸಲೇ ಇಲ್ಲ: ರಾಜು ಕಾಗೆ

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.