ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿರುವ ನಟ ಕಮಲ್ ಹಾಸನ್ ಅವರು ತಮ್ಮ ಮೊಂಡಾಟ ಮುಂದುವರಿಸಿದ್ದಾರೆ. ಇನ್ನೂ ಈ ವಿಚಾರವಾಗಿ ಕನ್ನಡಪರ ಹೋರಾಟಗಾರ ಶಿವರಾಮೇಗೌಡ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೇಡಿಕೊಳ್ಳಬೇಡಿ. ಅವನ ಸಿನಿಮಾ ಪ್ರದರ್ಶನ ಮಾಡ್ಬೇಡಿ.
ಕಮಲ್ ಹಾಸನ್ ಕ್ಷಮಾಪಣೆ ನಮಗೆ ಬೇಕಾಗಿಲ್ಲ. ಆದರೆ ನಾಯಕ, ನಟರು ಯಾಕೆ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಪ್ಯಾನ್ ಇಂಡಿಯಾ ನಟ ಎಂದು ಘೋಷಣೆ ಮಾಡಿಬಿಡಲಿ ಕನ್ನಡ ನಾಡಿನಲ್ಲಿ ತಮಿಳು ಸಿನಿಮಾಗಳು ನೂರಕ್ಕಿಂತ ಹೆಚ್ಚು ದಿನ ಓಡುತ್ತವೆ.
ನಿಮಗೆ ಈ ಲಕ್ಷಣಗಳು ಕಾಣ್ತಿದ್ಯಾ!? ಹಾಗಿದ್ರೆ ಲಿವರ್ ಕ್ಯಾನ್ಸರ್ ಬಂದಿದೆ ಎಂದರ್ಥ… ಕೂಡಲೇ ಡಾಕ್ಟರ್ ಭೇಟಿ ಮಾಡಿ!
ಕನ್ನಡದಿಂದ ರಾಜಕುಮಾರ್, ರಾಜಕುಮಾರ್ ಅವರಿಂದ ಕನ್ನಡ ಅಲ್ಲ ಎಂದು ಅವರೇ ಹೇಳಿದ್ದಾರೆ. ಈ ವಿಚಾರವಾಗಿ ಮುಲಾಜೆ ಇಟ್ಟುಕೊಳ್ಳಬಾರದು. ಅವರ ಹತ್ತಿರ ಕ್ಷಮೆ ಕೇಳಿ ಎಂದು ಬೇಡಿಕೊಳ್ಳುವ ಅವಶ್ಯಕತೆ ಏನಿದೆ. ಅವರ ಚಿತ್ರ ಪದರ್ಶನ ಮಾಡಬೇಡಿ ಎಂದು ವಾಗ್ದಾಳಿ ನಡೆಸಿದರು.